Wednesday, February 26, 2025
Wednesday, February 26, 2025

ಕೆ.ಎಂ.ಸಿ ಮಣಿಪಾಲ: ಎಂಡೋಸ್ಕೋಪಿಕ್ ಸರ್ಜರಿ- ಪೊಯಮ್ ಕಾರ್ಯಾಗಾರ

ಕೆ.ಎಂ.ಸಿ ಮಣಿಪಾಲ: ಎಂಡೋಸ್ಕೋಪಿಕ್ ಸರ್ಜರಿ- ಪೊಯಮ್ ಕಾರ್ಯಾಗಾರ

Date:

ಮಣಿಪಾಲ, ಸೆ.5: ಗ್ಯಾಸ್ಟ್ರೋಎಂಟರಾಲಜಿ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ ವತಿಯಿಂದ ಎಂಡೋಸ್ಕೋಪಿಕ್ ಸರ್ಜರಿ ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಕಾರ್ಯಾಗಾರ ನಡೆಯಿತು. ಇದು ಈ ತರಹದ ಮೊದಲನೆಯ ತರಬೇತಿ ಕಾರ್ಯಕ್ರಮ ಮತ್ತು ಚಿಕಿತ್ಸೆಗಾಗಿ ಸುಧಾರಿತ ಎಂಡೋಸ್ಕೋಪಿಕ್ ಕಾರ್ಯವಿಧಾನದ ಕಾರ್ಯಾಗಾರ. ಅಚಾಲಾಸಿಯಾ ಕಾರ್ಡಿಯಾ, ಆಹಾರ ಸೇವಿಸುವಲ್ಲಿ ತೊಂದರೆ, ಅನ್ನನಾಳದ ಅಸ್ವಸ್ಥತೆಯನ್ನು ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಎಂಬ ಕಡಿಮೆ ಛೇದನದ, ಗಾಯ ರಹಿತ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಿಂದ ನಿರ್ವಹಿಸಬಹುದು. ಈ ಕಾರ್ಯವಿಧಾನವು ಅಂದುಕೊಂಡಂತೆ ಯಶಸ್ವಿಯಾಗಿ ನಡೆದರೆ ರೋಗಿಯನ್ನು 48 ಗಂಟೆಗಳ ಒಳಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ.

ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗದ ವೈದ್ಯರು ಆಗಮಿಸಿ ಈ ಹೊಸ ತಂತ್ರಗಳ ಕುರಿತು ತರಬೇತಿ ಪಡೆದರು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಚ್ಚಿಯಿಂದ ಡಾ. ರಾಜ ವೇಣುಗೋಪಾಲ್, ಬೆಂಗಳೂರಿನಿಂದ ಡಾ. ಪ್ರಕಾಶ್ ಝಡ್, ಕಸ್ತೂರ್ಬಾ ಆಸ್ಪತ್ರೆಯ ಡಾ. ಶಿರನ್ ಶೆಟ್ಟಿ, ಮತ್ತು ಡಾ. ಗಣೇಶ್ ಭಟ್ ತರಬೇತಿ ನೀಡಿದರು.

ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಶಿರನ್ ಶೆಟ್ಟಿ ಮಾತನಾಡಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಜಾಗತಿಕ ಗುಣಮಟ್ಟಕ್ಕೆ ಸಮನಾದ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಹೊಂದಿದ್ದೇವೆ ಮತ್ತು ಭಾರತದ ಇತರ ಆಸ್ಪತ್ರೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾರ್ಯವಿಧಾನವನ್ನು ಮಾಡಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ 70 ವರ್ಷಗಳ ಆಚರಣೆಯ ಈ ಸಂಧರ್ಭದಲ್ಲಿ ನಮ್ಮ ಸಂಸ್ಥಾಪಕ ಡಾ. ಟಿ.ಎಂ.ಎ ಪೈ ಅವರ ಕನಸಿನಂತೆ ಜ್ಞಾನ ಮತ್ತು ಶಿಕ್ಷಣವನ್ನು ಹರಡಲು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು ಮತ್ತು ಕಾರ್ಯಾಗಾರಗಳನ್ನು ನಡೆಸುತ್ತಿದ್ದೇವೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!