Home ಸುದ್ಧಿಗಳು ಪ್ರಾದೇಶಿಕ ಕಲ್ಯಾಣಪುರ: ಶಿಕ್ಷಕರ ದಿನಾಚರಣೆ

ಕಲ್ಯಾಣಪುರ: ಶಿಕ್ಷಕರ ದಿನಾಚರಣೆ

ನವಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವ: ಡಾ. ಗಣನಾಥ ಶೆಟ್ಟಿ

389
0

ಉಡುಪಿ, ಸೆ. 8: ತ್ರಿಶ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿ (ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಸಹಭಾಗಿತ್ವ) ಕ್ರಿಯೇಟಿವ್ ಗುರು ದೇವೋಭವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಶಿಕ್ಷಕ ವೃತ್ತಿ ಪವಿತ್ರವಾದದ್ದು. ನವಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಸಮಾಜಕ್ಕೆ ನೀಡುವಲ್ಲಿ ಶಿಕ್ಷಕರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡುತ್ತಾರೆ ಎಂದರು.

ಕ್ರಿಯೇಟಿವ್ ಗುರು ದೇವೋಭವ ಕಾರ್ಯಕ್ರಮದಲ್ಲಿ ಉಡುಪಿಯ ಕಲ್ಯಾಣಪುರದ ಡಾ. ಟಿ. ಎಂ. ಎ. ಫೈ. ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶೇಖರ್ ಪಿ., ಬ್ರಹ್ಮಾವರ ಜಿ.ಎಮ್. ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಜಾರ್ಜ್ ಕುರಿಯನ್, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ಶಿಕ್ಷಣ ಪ್ರತಿಷ್ಠಾನದ ಪ್ರಾಂಶುಪಾಲ ಶರಣ್ ಕುಮಾರ್ ಹಾಗೂ ತ್ರಿಶ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಸುಧಾಕರ್ ಐಡಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಉಪನ್ಯಾಸಕ ವೃಂದದವರಿಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರುಗಳಲ್ಲಿ ಓರ್ವರಾದ ಅಮೃತ ರೈ ಮಾತನಾಡಿ, ವಿದ್ಯಾರ್ಥಿಗಳು ಜೀವನ ಪರ್ಯಂತ ತನ್ನ ಜೀವನೋಪಾಯಕ್ಕೆ ಮಾರ್ಗದರ್ಶನವನ್ನು ನೀಡಿರುವ ಸಮಾಜದಲ್ಲಿ ತನ್ನನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿದ ಗುರುವನ್ನು ಎಂದಿಗೂ ಮರೆಯಬಾರದು. ಬಾಗುವುದು ನಮ್ಮತನವಾಗಬೇಕೆ ಹೊರತು ಬೀಗುವುದರಿಂದ ನಮಗೇನು ಸಿಗಲಾರದು ಎಂದರು.

ಸಂಸ್ಥೆಯ ಪ್ರಾಂಶುಪಾಲ ಸ್ಟ್ಯಾನಿ ಲೋಬೋ ಸ್ವಾಗತಿಸಿ, ವಿದ್ಯಾರ್ಥಿಗಳಾದ ದೀಕ್ಷಿತ ನಿರೂಪಿಸಿ, ಮುಕ್ತ, ಹಿತೈಷಿಣಿ, ಶಶಾಂಕ್, ಸತೀಶ್ ಸನ್ಮಾನ ಪತ್ರವನ್ನು ವಾಚಿಸಿ, ಯುವರಾಜ್ ಬಿಕೆ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೊರಂಗ್ರಪಾಡಿಯ ಹುಲಿವೇಷ ತಂಡದವರಿಂದ ಹುಲಿ ಕುಣಿತ ನಡೆಯಿತು. ಹುಲಿ ಕುಣಿತದ ಹಿನ್ನೆಲೆ ಮಹತ್ವದ ಬಗ್ಗೆ ಕನ್ನಡ ಉಪನ್ಯಾಸಕ ಸಂತೋಷ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.