Sunday, July 26, 2026
Sunday, July 26, 2026

ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ: ಡಾ. ಗಣನಾಥ ಎಕ್ಕಾರು

ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ: ಡಾ. ಗಣನಾಥ ಎಕ್ಕಾರು

Date:

ಉಡುಪಿ: ರಾಜ್ಯ ಚುನಾವಣಾ ಆಯೋಗಗಳ ನಿರ್ದೇಶನದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು, ಒಂದೇ ಮತ ಒಂದೇ ಮೌಲ್ಯ ಪ್ರಜಾಪ್ರಭುತ್ವದ ಜೀವಾಳ. ಮತದಾರರು ತಮ್ಮ ಹಕ್ಕಿನ ಬಗ್ಗೆ ಅರಿವು ಮೂಡಿಸಿಕೊಂಡು ನಿಷ್ಪಕ್ಷಪಾತವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾರರ ದಿನಾಚರಣೆ ಪಾರದರ್ಶಕ ಮತದಾನದ ಬಗ್ಗೆ ಅರಿವು ಮೂಡಿಸುವ ದಿನ ಎಂದರು.

ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಪ್ರಜಾಪ್ರಭುತ್ವದಲ್ಲಿ ಮತದಾರ ಹಕ್ಕಿನ ಮಹತ್ವವನ್ನು ವಿವರಿಸಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಮಂಜುನಾಥ ಪ್ರಸ್ತಾವಿಕವಾಗಿ ಸ್ವಾಗತಿಸಿ, ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಉಮೇಶ್ ಪೈ ವಂದಿಸಿದರು. ಇತಿಹಾಸ ಎಂ.ಎ. ವಿದ್ಯಾರ್ಥಿನಿ ಅಶ್ವಿಜ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ತಿಮ್ಮಣ್ಣ ಜಿ. ಭಟ್, ಡಾ. ಉದಯ ಶೆಟ್ಟಿ ಕೆ. ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮುಕ್ತ ಮತ್ತು ಪಾರದರ್ಶಕ ಮತದಾನದ ಬಗ್ಗೆ ಪ್ರತಿಜ್ಞೆಯನ್ನು ಇತಿಹಾಸ ವಿಭಾಗ ರಿಯಾಜ್ ಅಹ್ಮದ್ ಬೋಧಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!