Monday, February 24, 2025
Monday, February 24, 2025

ರಾಧಾಕೃಷ್ಣ ನೃತ್ಯ ನಿಕೇತನ: ಭರತನಾಟ್ಯ

ರಾಧಾಕೃಷ್ಣ ನೃತ್ಯ ನಿಕೇತನ: ಭರತನಾಟ್ಯ

Date:

ಉಡುಪಿ, ಸೆ. 15: ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ರಾಧಾಕೃಷ್ಣ ನೃತ್ಯ ನಿಕೇತನ (ರಿ.) ಉಡುಪಿ ಇವರ ಮಾಸಿಕ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ ‘ವರ್ಣಜತಿಮಾಲ’ ಭರತನಾಟ್ಯ ನೃತ್ಯ ಮಾರ್ಗ ಪದ್ಧತಿಯ ಪ್ರಮುಖ ನೃತ್ಯ ಬಂದಗಳಾದ ಜತಿಸ್ವರ ಹಾಗೂ ಪದವರ್ಣಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಸಂಸ್ಥೆಯ 40 ವಿದ್ಯಾರ್ಥಿಗಳು ರಾಜಾಂಗಣದ ವೇದಿಕೆಯಲ್ಲಿ ನೃತ್ಯ ಪ್ರದರ್ಶನವನ್ನು ನಡೆಸಿದರು.
ವಿವಿಧ ರಾಗ, ತಾಳ, ರಚನೆಯಲ್ಲಿ ಹೊಂದಿದಂತಹ ಜತಿಸ್ವರ ಹಾಗೂ ಪದವರ್ಣಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ ಗುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಹಿಮ್ಮೇಳದಲ್ಲಿ ನಟ್ವಾಂಗ – ಹಾಡುಗಾರಿಕೆ – ನೃತ್ಯ ನಿರ್ದೇಶನ ವಿದುಷಿ ವೀಣಾ ಎಂ. ಸಾಮಗ , ಹಾಡುಗಾರಿಕೆ ವಿದುಷಿ ಅಶ್ವಿನಿ ಮನೋಹರ್, ಪಿಟೀಲು ವಾದನದಲ್ಲಿ ವಿದ್ವಾನ್ ಶ್ರೀಧರಾಚಾರ್ಯ ಉಡುಪಿ, ಮೃದಂಗ ವಾದನದಲ್ಲಿ ವಿದ್ವಾನ್ ಬಿ. ಮನೋಹರ್ ರಾವ್ ಮಂಗಳೂರು, ಕಾರ್ಯಕ್ರಮದ ನಿರ್ವಹಣೆ ವಿದುಷಿ ಪ್ರತಿಕ್ಷ ಹಾಗೂ ವರ್ಣಾಲಂಕಾರದಲ್ಲಿ ರಮೇಶ್ ಪಣಿಯಾಡಿ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!