Saturday, October 19, 2024
Saturday, October 19, 2024

ಕಾಪು: ವಿಪತ್ತು ನಿರ್ವಹಣಾ ತರಬೇತಿ ಶಿಬಿರ

ಕಾಪು: ವಿಪತ್ತು ನಿರ್ವಹಣಾ ತರಬೇತಿ ಶಿಬಿರ

Date:

ಕಾಪು, ಸೆ. 15: ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜಿಲ್ಲಾ ಮಟ್ಟದ ರೋವರ್‌ ರೇ೦ಜರ್‌ ಮೇಟ್‌(ನಾಯಕತ್ವ ಶಿಬಿರ) ‌ಹಾಗೂ ವಿಪತ್ತು ನಿರ್ವಹಣಾ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣಎಂ. ಗಾಂವ್ಕರ್‌ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಶಿಸ್ತು, ಸಹಬಾಳ್ವೆ, ಹಾಗೂ ನಾಯಕತ್ವ ಗುಣಗಳನ್ನು ತಮ್ಮ ಜೀವನದಲ್ಲಿ ಆಳವಡಿಸಲು ಇಂತಹ ಶಿಬಿರಗಳು ಅತ್ಯಗತ್ಯ ಎಂದರು.

ಉಡುಪಿ ಜಿಲ್ಲಾ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕಾರ್ಯದರ್ಶಿ ಬಿ. ಆನಂದ ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನಾಶೇಖರ್‌, ರೇಂಜರ್‌ ಲೀಡರ್‌ ಸವಿತಾ, ರೋವರ್ ಸ್ಕೌಟ್ಸ್ ಲೀಡರ್‌ ವಿತೇಶ್‌ ಕಾಂಚನ್‌ ಉಪಸ್ಥಿತರಿದ್ದರು. ಶಿಬಿರದಲ್ಲಿ ಉಡುಪಿ ಜಿಲ್ಲೆಯ ವಿವಿಧ ಕಾಲೇಜಿನ 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ, ಮ್ಯಾಪಿಂಗ್‌, ಧ್ವಜಗಳ ಮಾಹಿತಿ, ಗಂಟುಗಳು ಮತ್ತು ಲಾಸಿಂಗ್‌ ಬಗ್ಗೆ ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!