Monday, April 27, 2026
Monday, April 27, 2026

ಮಣೂರು ಪಡುಕರೆ: ವಿವಿಧ ಸೌಲಭ್ಯಗಳ ಉದ್ಘಾಟನೆ

ಮಣೂರು ಪಡುಕರೆ: ವಿವಿಧ ಸೌಲಭ್ಯಗಳ ಉದ್ಘಾಟನೆ

Date:

ಕೋಟ, ಸೆ. 17: ಗ್ರಾಮೀಣ ಭಾಗದ, ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೌಶಲಗಳ ಕಲಿಕೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಸಮಾಜ ಸೇವಾ ಫೌಂಡೇಶನ್‌ನ ಆದ್ಯತೆಯಾಗಿದೆ ಎಂದು ಗೀತಾನಂದ ಫೌಂಡೇಶನ್‌ನ ಪ್ರವರ್ತಕರಾದ ಆನಂದ ಸಿ ಕುಂದರ್ ಅಭಿಪ್ರಾಯಪಟ್ಟರು. ಸರಕಾರಿ ಪದವಿಪೂರ್ವ ಕಾಲೇಜು ಮಣೂರು ಪಡುಕರೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ಉಚಿತ ಕಂಪ್ಯೂಟರ್ ತರಗತಿ ಮತ್ತು ಆನ್‌ಲೈನ್ ಸಿಇಟಿ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗೀತಾನಂದ ಫೌಂಡೇಶನ್‌ನ ವತಿಯಿಂದ ನೀಡಿದ ಗುರುತು ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅವರು ವಿತರಿಸಿದರು.

‘ಫೆಸ್ಟ್ ಡಾಟ್ ಕಾಮ್’ ಉದ್ಘಾಟನೆ: ವಿದ್ಯಾರ್ಥಿಗಳು ವ್ಯವಹಾರ ಅಧ್ಯಯನ ವಿಷಯದ ಪರಿಕಲ್ಪನೆಗಳನ್ನು ಆಧರಿಸಿ ರಚಿಸಿದ ಮಾದರಿಗಳ ಪ್ರದರ್ಶನ ‘ಫೆಸ್ಟ್ ಡಾಟ್ ಕಾಮ್’ಗೆ ಆನಂದ ಸಿ ಕುಂದರ್ ಚಾಲನೆ ನೀಡಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯ ಪ್ರಾಂಶುಪಾಲರಾದ ಡಾ. ಸುನೀತಾ, ಪ್ರಾಧ್ಯಾಪಕರಾದ ಶಂಕರ್ ನಾಯ್ಕ್, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ಜಯರಾಮ ಶೆಟ್ಟಿ, ಗೀತಾನಂದ ಫೌಂಡೇಶನ್‌ನ ಸಮಾಜಕಾರ್ಯ ವಿಭಾಗದ ಸಂಯೋಜಕ ರವಿಕಿರಣ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡೆನಿಸ್ ಬಾಂಜಿ ಸ್ವಾಗತಿಸಿ, ಉಪನ್ಯಾಸಕ ಸತ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!