Saturday, October 19, 2024
Saturday, October 19, 2024

ಬಹುರೂಪಿ-2023 ಆಮಂತ್ರಣ ಪತ್ರಿಕೆ ಬಿಡುಗಡೆ

ಬಹುರೂಪಿ-2023 ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಸೆ. 20: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಾಹಿತಿ-ಶಿಕ್ಷಕ ನರೇಂದ್ರ ಕುಮಾರ್ ಕೋಟ ಇವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಬಹುರೂಪಿ-೨೦೨೩(ಸಾಧನೆಯ ಹೂಕಂಪನ) ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಸೋಮಶೇಖರ್ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವವರ ಸಂಖ್ಯೆ ಸಮಾಜದಲ್ಲಿ ಹೆಚ್ಚಾದಾಗ ಸಾಧನೆ ಮಾಡಬೇಕೆನ್ನುವ ಮನಸ್ಸುಗಳು ಹೆಚ್ಚುತ್ತದೆ ಎಂದರು. ಕಾರ್ಯಕ್ರಮದ ಸಂಚಾಲಕ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಪ್ರವರ್ತಕ ಆನಂದ್ ಸಿ ಕುಂದರ್ ಮಾತನಾಡಿ, ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕರೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ
9.30 ರಿಂದ ನಡೆಯಲಿದ್ದು, ಕಾರ್ಯಕ್ರಮವನ್ನು ನಾಡೋಜ ಡಾ.ಜಿ ಶಂಕರ್ ಉದ್ಘಾಟಿಸಲಿದ್ದು, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಲಿದ್ದಾರೆ,

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಆಶಯ ನುಡಿಗಳನ್ನಾಡಲಿದ್ದು, ಇನ್ನಿತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಶ್ರೀ ಕ್ಷೇತ್ರ ಅಮೃತೇಶ್ವರಿ ದೇವಸ್ಥಾನದ ಟ್ರಸ್ಟಿಗಳಾದ ಸುಬ್ರಾಯ್ ಆಚಾರ್ಯ, ಸುಶೀಲಾ ಸೋಮಶೇಖರ್, ಶಿಕ್ಷಕ ಸತೀಶ್ ವಡ್ಡರ್ಸೆ, ಸುಮುಖ ಶ್ಯಾಮಿಯಾನ ಮಾಲಕ ಪ್ರಕಾಶ್ ಪೂಜಾರಿ, ಭಗತ್ ಸಿಂಗ್ ಯುವವೇದಿಕೆ ಕೋಟದ ಅಧ್ಯಕ್ಷ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!