Saturday, October 19, 2024
Saturday, October 19, 2024

ವಿದ್ಯಾರ್ಥಿನಿಯರು ಎಲ್ಲಾ ರಂಗಗಳಲ್ಲಿ ಸಾಧಕರಾಗಬೇಕು: ಯಶ್ಪಾಲ್ ಸುವರ್ಣ

ವಿದ್ಯಾರ್ಥಿನಿಯರು ಎಲ್ಲಾ ರಂಗಗಳಲ್ಲಿ ಸಾಧಕರಾಗಬೇಕು: ಯಶ್ಪಾಲ್ ಸುವರ್ಣ

Date:

ಉಡುಪಿ, ಸೆ. 21: ವಿದ್ಯಾರ್ಥಿನಿಯರು ಕೇವಲ ಅಧ್ಯಯನದಲ್ಲಿ ಮುಂದೆ ಇದ್ದರೆ ಸಾಲದು, ಎಲ್ಲಾ ರಂಗಗಳಲ್ಲಿ ಸಾಧಕರಾಗಬೇಕು ಸಮಾಜವನ್ನು ಮುನ್ನಡೆಸುವವರಾಗಬೇಕು ಇದೇ ಉದ್ದೇಶದಿಂದ ಇತ್ತೀಚೆಗೆ ಕೇಂದ್ರ ಸರ್ಕಾರ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತಂದಿದೆ. ಆದ್ದರಿಂದ ವಿದ್ಯಾರ್ಥಿನಿಯರು ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮತ್ತು ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲೆ ಹಂಸವತಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ತಾರಾದೇವಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ಶಿಕ್ಷಣ ಸೇವಾ ಸಮಿತಿ ಸದಸ್ಯ ಯೋಗೀಶ್ ಭಾಗವಹಿಸಿದ್ದರು. ಶಾಸಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಾರ್ಚ್ 2023ರ ಎಸ್.ಎಸ್.ಎಲ್.ಸಿ ಯ 29 ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಗಳಲ್ಲಿ ವಿಶಿಷ್ಟ ಶ್ರೇಣಿಯ ಅಂಕವನ್ನು ಗಳಿಸಿದ 61 ವಿದ್ಯಾರ್ಥಿನಿಯರು ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದರು.

ಪ್ರಾಂಶುಪಾಲೆ ಡಾ. ಸುಮಾ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ದಯಾನಂದ್ ಸ್ವಾಗತಿಸಿ, ಹಿರಿಯ ಶಿಕ್ಷಕಿ ಇಂದಿರಾ ವಂದಿಸಿದರು. ಉಪನ್ಯಾಸಕ ಗಂಗಾಧರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!