Thursday, February 27, 2025
Thursday, February 27, 2025

ಬ್ರಹ್ಮಾವರ: ಸಿ.ಸಿ.ಟಿ.ವಿ ತರಬೇತಿ ಸಮಾರೋಪ

ಬ್ರಹ್ಮಾವರ: ಸಿ.ಸಿ.ಟಿ.ವಿ ತರಬೇತಿ ಸಮಾರೋಪ

Date:

ಬ್ರಹ್ಮಾವರ, ಸೆ. 23: ದೇಶದ ಆರ್ಥಿಕ ಅಭಿವೃದ್ಧಿ ಯುವಜನರು ಸ್ವಂತ ಉದ್ಯೋಗ ಮಾಡಿದರೆ ಮಾತ್ರ ಸಾಧ್ಯ. ಪ್ರತಿಯೊಬ್ಬರೂ ತನ್ನದೇ ಆದ ಸ್ವಂತ ಉದ್ಯೋಗ ಮಾಡಿದರೆ ಆದಾಯ ಹೆಚ್ಚಾಗಲು ಸಾಧ್ಯ ಎಂದು ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ನವೀನ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದ ಸಿಸಿ ಟಿ.ವಿ ಅಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು. ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನಡೆಸುವ ಕೆಲಸ ಕಾರ್ಯಗಳು ಸಮಾಜಕ್ಕೆ ಪ್ರಯೋಜನಕಾರಿಯಾಗಿದೆ ಎಂದು ಶುಭ ಹಾರೈಸಿದರು. ತರಬೇತಿಯ ಅತಿಥಿ ಉಪನ್ಯಾಸಕರಾದ ಗುರುರಾಜ್ ತಮ್ಮ ಅನುಭವ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮೀಶ ಎ.ಜಿ ಮಾತನಾಡಿ, ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಹೆಚ್ವಿನ ಕಲಿಕೆ ಪಡೆದುಕೊಂಡಿದ್ದೀರಿ. ಇದರ ಸದುಪಯೋಗ ಪಡೆದು ಉದ್ಯಮಿಗಳಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿ ನಿರೂಪಿಸಿದರು. ಉಪನ್ಯಾಸಕರಾದ ಸಂತೋಷ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಕಛೇರಿ ಸಹಾಯಕ ರವಿ ಸಾಲ್ಯಾನ್ ವಂದಿಸಿದರು. ಪ್ರಾರ್ಥನೆಯನ್ನು ರಾಘವೇಂದ್ರ ನೆರವೇರಿಸಿದರು. ದಕ್ಷ, ಜಯರಾಜ್, ಜಾನ್ಸನ್, ರಾಘವೇಂದ್ರ ತರಬೇತಿ ಅನುಭವ ಹಂಚಿಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!