Sunday, February 23, 2025
Sunday, February 23, 2025

ಬನ್ನಾಡಿ: ಆಳುಪ ಕಾಲದ‌ ಶಾಸನ ಪತ್ತೆ

ಬನ್ನಾಡಿ: ಆಳುಪ ಕಾಲದ‌ ಶಾಸನ ಪತ್ತೆ

Date:

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ವಡ್ಡಾರ್ಸೆ ಪಂಚಾಯತಿ ವ್ಯಾಪ್ತಿಗೆ ಸೇರುವ ಬನ್ನಾಡಿ ಗ್ರಾಮದ ಹೆಬ್ಬಾರ್‌ ಒಳಲು ಪ್ರದೇಶದ ಗದ್ದೆಯಲ್ಲಿ ಆಳುಪ ಕಾಲದ ಶಾಸನವು ಪತ್ತೆಯಾಗಿರುತ್ತದೆ‌. ಈ ಶಾಸನವನ್ನು ಪ್ರಾಚ್ಯಸಂಚಯ‌ ಸಂಶೋಧನಾ ‌ಕೇಂದ್ರ ಉಡುಪಿ (ಎನ್.ಟಿ.ಸಿ‌ – ಎ‌.ಒ.ಎಂ. ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ‌.ಕೃಷ್ಣಯ್ಯ ಇವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಹಾಗೂ ಇಂದಿರಾಗಾಂಧಿ ವಸತಿ ಶಾಲೆ- ಸಿದ್ದಾಪುರ ಇಲ್ಲಿನ ಇಂಗ್ಲೀಷ್ ಸಹ ಶಿಕ್ಷಕರಾದ ರಾಘವೇಂದ್ರ ಶೆಣೈ ಅವರು ಅಧ್ಯಯನ ‌ನಡೆಸಿರುತ್ತಾರೆ.

ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನವು 4 ಅಡಿ ಎತ್ತರ ಹಾಗೂ 2 ಅಡಿ ಅಗಲವಿದ್ದು, ಹೆಚ್ಚಿನ ಅಕ್ಷರಗಳು ತೃಟಿತಗೊಂಡಿರುತ್ತದೆ. ಶಾಸನದ ಮೇಲ್ಭಾಗದಲ್ಲಿ ಶಿವಲಿಂಗವಿದ್ದು ಇದರ ಇಕ್ಕೆಲಗಳಲ್ಲಿ ಎರಡು ಆಕಳುಗಳು ಮತ್ತು ಕೈ ಮುಗಿದು ನಿಂತಿರುವ ವ್ಯಕ್ತಿಯ ಉಬ್ಬು ಕೆತ್ತನೆಯಿದೆ.

ಶಾಸನದ ಪ್ರಾರಂಭದಲ್ಲಿ “ಶ್ರೀಮತ್ಪಾಣ್ಡ್ಯ ಚಕ್ರವರ್ತಿ” ಎಂಬ ಉಲ್ಲೇಖವಿದ್ದು, ಲಿಪಿಯ ಹಾಗೂ ಓದಲು ಸಾಧ್ಯವಾದ ಅಕ್ಷರದ ಆಧಾರದ ಮೇಲೆ ಇದು 12ನೇ ಶತಮಾನದ ‌ದಾನ ಶಾಸನ ಎಂದು ಸಂಶೋಧನಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ಮಾದರಿಯ ಶಾಸನವನ್ನು‌ ಈ‌ ಮೊದಲು ಬಿ.ಕುಶ ಆಚಾರ್ಯ ಕೃಷಿ ಭೂಮಿಯಲ್ಲಿ ಪತ್ತೆ ಮಾಡಲಾಗಿದೆ. ಕ್ಷೇತ್ರಕಾರ್ಯ ಸಂದರ್ಭದಲ್ಲಿ ನವೀನ್ ಕುಲಾಲ್ ಪಡುಬೆಳ್ಳೆ, ಬಿ.‌ಕುಶ ಆಚಾರ್ಯ ಸಹಕಾರ ನೀಡಿರುತ್ತಾರೆ‌.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!