Tuesday, October 22, 2024
Tuesday, October 22, 2024

ಈಶ್ವರ್ ಮಲ್ಪೆ ಅವರಿಗೆ ಶ್ರೀ ವಿನಾಯಕ ಸಾಧನಶ್ರೀ ಪುರಸ್ಕಾರ

ಈಶ್ವರ್ ಮಲ್ಪೆ ಅವರಿಗೆ ಶ್ರೀ ವಿನಾಯಕ ಸಾಧನಶ್ರೀ ಪುರಸ್ಕಾರ

Date:

ಕೋಟ, ಸೆ. 26: ಕೋಟ, ಶ್ರೀ ವಿನಾಯಕ ಯುವಕ ಮಂಡಲ(ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ಕೊಡ ಮಾಡುವ 2023 ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಈಜುಪಟು, ಮುಳುಗು ತಜ್ಞ, ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ಅಪತ್ಭಾಂಧವ ಈಶ್ವರ್ ಮಲ್ಪೆ ಅವರನ್ನು ಆಯ್ಕೆ ಮಾಡಲಾಗಿದೆ. 900 ಕ್ಕೂ ಮಿಕ್ಕಿ ಶವಗಳನ್ನು ಮೇಲಕೆತ್ತಿದ, ಅದೆಷ್ಟೋ ಜೀವಗಳನ್ನು ರಕ್ಷಿಸಿದ, ಬಂದರಿನಲ್ಲಿ ಮುಳುಗಿದ ವಾಹನಗಳನ್ನು, 200ಕ್ಕೂ ಮಿಕ್ಕಿ ಮೊಬೈಲ್ ಪೋನುಗಳನ್ನು, ಬೋಟುಗಳ ಬಿಡಿ ಭಾಗಗಳನ್ನು ಮೇಲೆ ತರುವಲ್ಲಿ ಅವರ ಸಾಹಸ ಅನನ್ಯವಾದುದು. ಇಂತಹ ಸಾಹಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಈಶ್ವರ್ ಮಲ್ಪೆ ಅವರನ್ನು 2023 ನೇ ಸಾಲಿನ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಪುರಸ್ಕಾರ ಪ್ರದಾನ ಕಾರ್ಯಕ್ರಮ ಅಕ್ಟೋಬರ್ 20 ರ ಸಂಜೆ 7.30 ಕ್ಕೆ ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಯ್ಬ್ರಕಟ್ಟೆಯಲ್ಲಿ ನಡೆಯುವ ಶ್ರೀ ಸಾರ್ವಜನಿಕ ಶಾರದೋತ್ಸವದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಅಧ್ಯಕ್ಷ ನಂದೀಶ್ ನಾಯ್ಕ, ಕಾರ್ಯದರ್ಶಿ ರಾಜೇಶ್ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ...

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...

ಶ್ರೀ ಕೃಷ್ಣ ಮಠದಲ್ಲಿ ಗೂಡುದೀಪ ಸ್ಪರ್ಧೆ

ಉಡುಪಿ, ಅ.21: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ...

ರೆಡ್‌ಕ್ರಾಸ್ ನಾಯಕರಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.21: ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ...
error: Content is protected !!