Saturday, October 19, 2024
Saturday, October 19, 2024

ಸಮಗ್ರ ಕೃಷಿ ಪದ್ಧತಿ ಉತ್ತೇಜನಕ್ಕಾಗಿ ಪ್ರೊ. ಜಿ.ಕೆ. ವೀರೇಶ್ ಎಂಡೋಮೆಂಟ್ ಫಂಡ್: ಅರ್ಜಿ ಆಹ್ವಾನ

ಸಮಗ್ರ ಕೃಷಿ ಪದ್ಧತಿ ಉತ್ತೇಜನಕ್ಕಾಗಿ ಪ್ರೊ. ಜಿ.ಕೆ. ವೀರೇಶ್ ಎಂಡೋಮೆಂಟ್ ಫಂಡ್: ಅರ್ಜಿ ಆಹ್ವಾನ

Date:

ಉಡುಪಿ, ಸೆ.29: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಸ್ಥಾಪಕ ಅಧ್ಯಕ್ಷರು ಅಲ್ಯುಮಿನಿ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಪ್ರೊ. ಜಿ.ಕೆ ವೀರೇಶ್ ರವರು 15 ಲಕ್ಷ ರೂ. ಗಳನ್ನು ರಾಜ್ಯದ ಸಮಗ್ರ ಕೃಷಿ ಪದ್ಧತಿ ಉತ್ತೇಜನಕ್ಕಾಗಿ ಅಲ್ಯುಮಿನಿ ಅಸೋಸಿಯೇಷನ್‌ಗೆ ದಾನವನ್ನು ನೀಡಿದ್ದು, ಈ ವಿಷಯವಾಗಿ ವಾರ್ಷಿಕ ಉತ್ತರ, ದಕ್ಷಿಣ ಹಾಗೂ ಕರಾವಳಿ ಅಥವಾ ಮಲೆನಾಡು ಭಾಗಗಳಿಂದ ಕೃಷಿ ವಿಶ್ವವಿದ್ಯಾಲಯಗಳ ವಿಸ್ತರಣಾ ನಿರ್ದೇಶಕರು, ಹಿರಿಯ ವಿಜ್ಞಾನಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಸಂಬಂಧಿತ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಿಂದ ನಾನು ನಿರ್ದೇಶಿತ ಪ್ರತ್ಯೇಕ ವಿಭಾಗದ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ಮೂರು ರೈತರಿಗೆ ತಲಾ 25000 ರೂ. ಮೊತ್ತದ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಲಾಗುತ್ತಿದ್ದು, ವಿಜೇತ ರೈತರನ್ನು ಸಂಪನ್ಮೂಲ ರೈತರಾಗಿ ಪರಿಗಣಿಸಲಾಗುವುದು.

ಆಯಾ ವಿಭಾಗದಿಂದ ನಾಮನಿರ್ದೇಶಿತ ರೈತರನ್ನು ಅಲ್ಯುಮಿನಿ ಆಸೋಸಿಯೇಷನ್‌ನಿಂದ ರಚಿಸಲಾದ ತಂಡವು ರೈತರ ಪ್ರದೇಶಗಳಿಗೆ ಭೇಟಿ ನೀಡಿ, ಸಮಗ್ರ ಕೃಷಿ ಪದ್ಮತಿಗೆ ಅವರ ಕೊಡುಗೆ ಹಾಗೂ ವೈಯಕ್ತಿಕ ಮಾಹಿತಿ ನಮೂನೆಯ ಪರಿಶೀಲನೆ ಆಧಾರದ ಮೇಲೆ ವಿಜೇತರನ್ನು ಆಯ್ಕೆ ಮಾಡಿ, ವಿಜೇತ ರೈತರನ್ನು ಬೆಂಗಳೂರಿನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮ ಹಾಗೂ ಸಮಗ್ರ ಕೃಷಿ ಪದ್ಧತಿ ಬಗೆಗಿನ ಒಂದು ದಿನದ ಕಾರ್ಯಾಗಾರದಲ್ಲಿ ಗೌರವಿಸಲಾಗುವುದು. ಆದ್ದರಿಂದ ಜಿಲ್ಲೆಗೆ ಸಂಬಂಧಿಸಿದಂತೆ ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡ ಆಸಕ್ತ ರೈತರು ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!