Friday, October 18, 2024
Friday, October 18, 2024

ಮುನಿಯಾಲು ಆಯುರ್ವೇದ ಸಂಸ್ಥೆಯ ಬುದ್ದಾಯುರ್ವೇದ್ ಆ್ಯಪ್ ಬಿಡುಗಡೆ

ಮುನಿಯಾಲು ಆಯುರ್ವೇದ ಸಂಸ್ಥೆಯ ಬುದ್ದಾಯುರ್ವೇದ್ ಆ್ಯಪ್ ಬಿಡುಗಡೆ

Date:

ಉಡುಪಿ, ಸೆ. 30: ಜನಸಾಮಾನ್ಯರ ಮಾನಸಿಕ ಆರೋಗ್ಯ ರಕ್ಷಣೆ, ದೈಹಿಕ ಆರೋಗ್ಯ ಪುನರ್‌ಸ್ಥಾಪನೆ ಹಾಗೂ ಆಯ್ದ ಗಿಡಮೂಲಿಕಾ ಕೃಷಿಯಿಂದ ನೆಲ, ಜಲ ಮತ್ತು ವಾಯು ಮಾಲಿನ್ಯಗಳಿಂದ ರಕ್ಷಣೆ ಮತ್ತು ರಾಜ್ಯದ ರೈತರ ಆದಾಯ ವೃದ್ಧಿ ಮುಂತಾದವುಗಳ ಬಗ್ಗೆ ಅಮೂಲ್ಯ ಮಾಹಿತಿಗಳನ್ನು ಉಚಿತವಾಗಿ ಒದಗಿಸುವ ‘ಬುದ್ಧಾಯುರ್ವೇದ್ ಆ್ಯಪ್’ ನ್ನು ಮಣಿಪಾಲದ ಮುನಿಯಾಲು ಆಯುರ್ವೇದ ಸಂಸ್ಥೆಯು ಬಿಡುಗಡೆಗೊಳಿಸಿದೆ. ಈ ಆ್ಯಪ್‌ನ್ನು ತಮ್ಮ ಫೋನ್‌ನಲ್ಲಿ ರಿಜಿಸ್ಟರ್ ಮಾಡುವ ಮೂಲಕ ರಾಜ್ಯದ ಜನರು ಭಗವಾನ್ ಬುದ್ಧನ ಬೋಧನೆಯಾದ ತ್ರಿಪಿಟಕದ ಸಾರಾಂಶವಾದ ಕನ್ನಡ ಸಾರಸ್ವತಲೋಕದ ದಿಗ್ಗಜರಿಂದ ಪ್ರಶಂಸೆಗೊಳಗಾದ ಬಹುಬೇಡಿಕೆಯ ಸಮ್ಮಾಸಂಬುದ್ಧ ಮತ್ತು ಜಂಬೂದ್ವೀಪ, ವಿಶ್ವದ ಅತ್ಯಂತ ಶ್ರೇಷ್ಠ ಉಪದೇಶವಾದ ಚತುರಾರ್ಯ ಸತ್ಯ, ಕೌಟುಂಬಿಕ ಶಾಂತಿ ಮತ್ತು ಸುಭಿಕ್ಷೆಯನ್ನುಂಟು ಮಾಡುವ ಬೌದ್ಧ ರಕ್ಷಣಾ ಮಂತ್ರಗಳು, ಬುದ್ಧಾಯುರ್ವೇದ ಮಾಸಪತ್ರಿಕೆಗಳು, ಕನ್ನಡದಲ್ಲಿ ಪ್ರಥಮ ಬಾರಿಗೆ ಬುದ್ಧನ ಉನ್ನತ ಬೋಧನೆಯಾದ ಅಭಿದಮ್ಮ, ವಿಪಸ್ಸನಧ್ಯಾನ ಕ್ರಮವನ್ನು ವಿವರಿಸುವ ಮಹಾಸತಿಪಟ್ಟಾನಸುತ್ತ, ಧಮ್ಮಪದ, ಮಿಲಿಂದಪನ್ನ, ಜಾತಕಕತೆಗಳು, ಯೋಗ, ದಿನಚರ್ಯ, ನಡಿಗೆಯ ಧ್ಯಾನ ಮತ್ತು ಧ್ಯಾನಾಸಕ್ತರಿಗೆ ಧ್ಯಾನದ ಸಮಯದಲ್ಲಿ ತೊಂದರೆ ಕೊಡುವ ವಿವಿಧ ಆಲೋಚನೆಗಳ ನಿವಾರಣೆಯ ಮಾಹಿತಿ ನೀಡುವ “ಮುನಿಯೋಗ”, ರಾಜ್ಯದ ನೆಲ ಜಲ ಹಾಗೂ ವಾಯುಮಾಲಿನ್ಯಗಳಿಂದ ರಕ್ಷಣೆ ಮತ್ತು ರೈತರ ಆದಾಯ ಹೆಚ್ಚಿಸಲು ಗಿಡಮೂಲಿಕೆ ಕೃಷಿಯ ಮಾಹಿತಿನೀಡುವ “ವನದೇಗುಲ”, ದೀರ್ಘಕಾಲೀನ
ಕಾಯಿಲೆಗಳಿಗೆ ದೇಹ ಪ್ರಕೃತಿಯ ಆಧಾರದ ಮೇಲೆ ಉತ್ಕೃಷ್ಟಮಟ್ಟದ ಬುದ್ಧಾಯುರ್ವೇದ ಔಷಧಿಗಳು ಮತ್ತು ಚಿಕಿತ್ಸಾ ಕಲ್ಪಗಳ ಮಾಹಿತಿ, ಮದ್ಯಪಾನ ಹಾಗೂ ಮಾದಕ ದ್ರವ್ಯ ಸೇವನೆಯಂತಹ ಸಾಮಾಜಿಕ ಪಿಡುಗು ನಿವಾರಣೆಯ ಚಿಕಿತ್ಸಾ ಮಾಹಿತಿ ನೀಡುವ ಮದಾತ್ಯಯಕಲ್ಪ ಮುಂತಾದ ಪುಸ್ತಕಗಳ್ನು ಉಚಿತವಾಗಿ ಪಡೆದುಕೊಳ್ಳಬಹುದು ಹಾಗೂ ಬುದ್ಧಾಯುರ್ವೇದ್ ಆ್ಯಪ್ ಗೂಗಲ್ ಪ್ಲೇಸ್ಟೋರ್ ಮತ್ತು ಆ್ಯಪ್ ಸ್ಟೋರ್‌ನಲ್ಲಿ ಲಭ್ಯ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!