Saturday, October 19, 2024
Saturday, October 19, 2024

ಉಪ್ಪೂರು ನಂದಿನಿ ಘಟಕಕ್ಕೆ ತೆಂಕನಿಡಿಯೂರು ಕಾಲೇಜು ವಿದ್ಯಾರ್ಥಿಗಳ ಭೇಟಿ

ಉಪ್ಪೂರು ನಂದಿನಿ ಘಟಕಕ್ಕೆ ತೆಂಕನಿಡಿಯೂರು ಕಾಲೇಜು ವಿದ್ಯಾರ್ಥಿಗಳ ಭೇಟಿ

Date:

ಉಡುಪಿ, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಬಿಕಾಂ ಮತ್ತು ಬಿಬಿಎ ಪದವಿ ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯ ಕೈಗಾರಿಕಾ ಕೇಂದ್ರದ ಭೇಟಿ ಶೀರ್ಷಿಕೆ ಅಡಿಯಲ್ಲಿ ಉಪ್ಪೂರಿನ ನಂದಿನಿ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು ಐ.ಎಸ್.ಓ 22000 ಪ್ರಮಾಣಿಕೃತ ಸಂಸ್ಥೆಯಾಗಿದ್ದು ಗೋವಿನಿಂದ ಗ್ರಾಹಕರವರೆಗಿನ ಎಲ್ಲಾ ಹಂತಗಳಲ್ಲಿಯೂ ಗುಣಮಟ್ಟವನ್ನು ಕಾಯ್ದುಕೊಂಡು ಕೃಷಿಕರಿಗೆ ಮತ್ತು ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ಒದಗಿಸುತ್ತಿದೆ.

ಉಪ್ಪೂರಿನ ನಂದಿನಿ ಘಟಕದಲ್ಲಿನ ಹಾಲು ಮತ್ತು ಹಾಲಿನ ಉತ್ಪನ್ನದ ತಯಾರಿ, ಮತ್ತು ಮಾನವ ಸಂಪನ್ಮೂಲ ವ್ಯವಸ್ಥೆ, ಮಾರುಕಟ್ಟೆ ವ್ಯವಸ್ಥೆ, ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆ ಕುರಿತು ವಿವರವಾದ ಮಾಹಿತಿಯನ್ನು ನಂದಿನಿ ಘಟಕ ಉಪ್ಪೂರಿನ ಮಾರುಕಟ್ಟೆ ವ್ಯವಸ್ಥಾಪಕರು ಮತ್ತು ತಂತ್ರಜ್ಞಾನದ ವ್ಯವಸ್ಥಾಪಕ ಅಧಿಕಾರಿಗಳು ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಬಿಂದು ಟಿ., ವ್ಯವಹಾರಶಾಸ್ತ್ರ ಅಧ್ಯಯನ ಮುಖ್ಯಸ್ಥರಾದ ಡಾ. ರಘು ನಾಯ್ಕ, ವಾಣಿಜ್ಯಶಾಸ್ತ್ರ ಸಹಪ್ರಾಧ್ಯಾಪಕ ಡಾ. ಉದಯ ಕುಮಾರ್, ಸಹಾಯಕ ಪ್ರಾಧ್ಯಾಪಕ ದಿನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!