Tuesday, February 25, 2025
Tuesday, February 25, 2025

ಔದ್ಯೋಗಿಕ ತರಬೇತಿ ಗ್ರಾಮೀಣ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಹಕಾರಿ: ಪ್ರೊ. ಸುರೇಶ್ ರೈ ಕೆ

ಔದ್ಯೋಗಿಕ ತರಬೇತಿ ಗ್ರಾಮೀಣ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಹಕಾರಿ: ಪ್ರೊ. ಸುರೇಶ್ ರೈ ಕೆ

Date:

ಮಲ್ಪೆ, ಅ.4: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 30 ದಿನಗಳ ಔದ್ಯೋಗಿಕ, ಕೌಶಲಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಇವರು ಅಧ್ಯಕ್ಷತೆ ವಹಿಸಿ ತರಬೇತಿ ಉದ್ಘಾಟಿಸಿ ಮಾತನಾಡಿ, ಜೀವನ ಕೌಶಲ, ಔದ್ಯೋಗಿಕ ತರಬೇತಿಯು ಗ್ರಾಮೀಣ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಹಕಾರಿಯಾಗಿ ಕಾರ್ಪೋರೇಟ್ ವಲಯದಲ್ಲಿಯೂ ಉದ್ಯೋಗ ದೊರಕಿಸಿ ಕೊಡುವ ತರಬೇತಿ ಕಾರ್ಯಕ್ರಮವಾಗಿರುತ್ತದೆ ಎಂದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ದಿನೇಶ್ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ತರಬೇತಿಯು ಸ್ಪೋಕನ್ ಇಂಗ್ಲೀಷ್, ನಾಯಕತ್ವ ತರಬೇತಿ, ಸಂವಹನ ಕಲೆ, ಜೀವನ ಕೌಶಲ, ಸಂದರ್ಶನ ಎದುರಿಸುವ ಕಲೆ, ಸಮಯ ನಿರ್ವಹಣೆ, ಸಮೂಹ ಚರ್ಚೆ, ಭಾಷಣ ಕಲೆ, ವೃತ್ತಿ ಜೀವನಕ್ಕೆ ತಯಾರಿ ಮುಂತಾದ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.

ಉನ್ನತಿ ಯುನೆಕ್ಸ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಗುರುಪ್ರಸಾದ್ ಭಟ್, ಶೈಕ್ಷಣಿಕ ಸಂಚಾಲಕರಾದ ಡಾ. ಪ್ರಸಾದ್ ರಾವ್ ಎಂ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ ಸ್ವಾಗತಿಸಿ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!