Home ಸುದ್ಧಿಗಳು ಪ್ರಾದೇಶಿಕ ಎನ್.ಎಸ್.ಎಸ್‌ ಶಿಬಿರದ ಪೂರ್ವಭಾವಿ ಸಭೆ

ಎನ್.ಎಸ್.ಎಸ್‌ ಶಿಬಿರದ ಪೂರ್ವಭಾವಿ ಸಭೆ

234
0

ಉಡುಪಿ, ಅ.4: ಕಾರ್ಕಳದ ಮೂರೂರಿನಲ್ಲಿ ಅಕ್ಟೋಬರ್ 12 ರಿಂದ 18 ರವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ಎನ್‌.ಎಸ್‌.ಎಸ್‌ ಶಿಬಿರವು ನಡೆಯಲಿದೆ. ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ನಡೆಯಿತು. ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಊರಿನ ಗಣ್ಯರಲ್ಲಿ ಶಿಬಿರದ ಎಲ್ಲ ಕೆಲಸ ಕಾರ್ಯಗಳಲ್ಲಿ ತನು ಮನ ಧನ ಸಹಾಯ ಮತ್ತು ಸಹಕಾರ ಕೋರಿದರು.

ಶಿಬಿರದ ಸಂಯೋಜಕರಾದ ಉಪನ್ಯಾಸಕ ಉಮೇಶ್‌ ಪೂರ್ವ ತಯಾರಿ ಮತ್ತು ಶಿಬಿರದಲ್ಲಿ ಅಗತ್ಯತೆ ಮತ್ತು ಖರ್ಚು ವೆಚ್ಚಗಳ ಕುರಿತು ಮಾಹಿತಿ ನೀಡಿದರು. ಪಂಚಾಯತ್‌ ಮಾಜಿ ಅಧ್ಯಕ್ಷರಾದ ಸಂತೋಷ ಶೆಟ್ಟಿ, ಉದ್ಯಮಿ ಚೇತನ್‌ ಶೆಟ್ಟಿ, ಸರ್ವೋತ್ತೋಮ, ಕಡಂಬ ವಾಸು ಶೆಟ್ಟಿ, ಹರಿಶ್ಚಂದ್ರ ಕುಲಾಲ್‌, ಚಂದ್ರಶೇಖರ ಹೆಗ್ಡೆ, ಶಾಂತರಾಮ ಹೆಗ್ಡೆ, ಮಹಾವೀರ ಕಡಂಬ ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.