Monday, February 24, 2025
Monday, February 24, 2025

ಕುಂದಾಪ್ರ ಕನ್ನಡ ಭಾಷೆಯ ಸಿನಿಮಾಗಳು ಇನ್ನಷ್ಟು ನಿರ್ಮಾಣಗೊಳ್ಳಲಿ: ಅಭಿಲಾಷ್ ಶೆಟ್ಟಿ

ಕುಂದಾಪ್ರ ಕನ್ನಡ ಭಾಷೆಯ ಸಿನಿಮಾಗಳು ಇನ್ನಷ್ಟು ನಿರ್ಮಾಣಗೊಳ್ಳಲಿ: ಅಭಿಲಾಷ್ ಶೆಟ್ಟಿ

Date:

ಕೋಟ, ಅ.6: ಸಿನಿಮಾ ಕ್ಷೇತ್ರಕ್ಕೆ ಕರಾವಳಿ ಭಾಗದ ಜನರು ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಸಂತಸದ ವಿಷಯ, ಕುಂದಾಪ್ರ ಭಾಷೆಯ ಕಲಾತ್ಮಕ ಚಿತ್ರಗಳು ಇನ್ನಷ್ಟು ನಿರ್ಮಾಣವಾಗಿ, ಕುಂದಾಪ್ರ ಭಾಷೆಯ ಸೊಗಡು ವಿಶ್ವದಾದಂತ್ಯ ಪಸರಿಸಲಿ ಎಂದು ನಟ-ನಿರ್ದೇಶಕ ಅಭಿಲಾಷ್ ಶೆಟ್ಟಿ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.)ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ(ರಿ.)ಕೋಟ ಆಶ್ರಯದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹುಟ್ಟೂರ ಪ್ರಶಸ್ತಿಗೆ 19 ನೇ ವರುಷದ ಸಂಭ್ರಮ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂಪನ- 2023(ಸಂಗೀತ ಸಂಪುಟದ ಸಂಚಲನ) ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಚಲನಚಿತ್ರ ಉತ್ಸವ, ಸಂವಾದ ಮಾತುಕತೆ ಹಾಗೂ ಕಾರಂತ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್, ನಾವಾಡುವ ಭಾಷೆಯ ಬಗ್ಗೆ ಕೀಳರಿಮೆ ಮೂಡಿಸಿಕೊಳ್ಳದೆ ಅವಕಾಶವಿದ್ದಾಗ ಎಲ್ಲ ಕ್ಷೇತ್ರಗಳಲ್ಲಿ ಅದನು ಬಳಸಿಕೊಳ್ಳಬೇಕು ಎಂದರು. ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯೆ ಅಶ್ವಿನಿ ದಿನೇಶ್, ಸದಸ್ಯರಾದ ಎಚ್. ಪ್ರಮೋದ ಹಂದೆ, ಸ.ಹಿ.ಪ್ರಾ.ಶಾಲೆ ಕೋಟತಟ್ಟು ಇಲ್ಲಿನ ಸಹಶಿಕ್ಷಕಿ ಸಂಗೀತಾ ಎಸ್ ಕೋಟ್ಯಾನ್ ಉಪಸ್ಥಿತರಿದ್ದರು. ರವೀಂದ್ರ ಶೆಟ್ಟಿ ತಂತ್ರಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭಾ ಕಾರ್ಯಕ್ರಮದ ನಂತರ ಸ.ಹಿ.ಪ್ರಾ.ಶಾಲೆ ಕೋಟತಟ್ಟು ವಿದ್ಯಾರ್ಥಿಗಳಿಂದ ಕಾರಂತ ದರ್ಶನ ಹಾಗೂ ಕೋಳಿತಾಳ್ ಸಿನಿಮಾ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!