Monday, February 24, 2025
Monday, February 24, 2025

ಕೆ.ಪಿ.ಎಸ್ ಶಾಲೆಗಳು ಮಾದರಿ ಶಾಲೆಗಳಾಗಬೇಕು: ಜಿ.ಪಂ ಸಿಇಓ ಡಾ. ನವೀನ್ ಭಟ್

ಕೆ.ಪಿ.ಎಸ್ ಶಾಲೆಗಳು ಮಾದರಿ ಶಾಲೆಗಳಾಗಬೇಕು: ಜಿ.ಪಂ ಸಿಇಓ ಡಾ. ನವೀನ್ ಭಟ್

Date:

ಉಡುಪಿ: ಕೆ.ಪಿ.ಎಸ್ ಶಾಲೆಗಳು ವಿದ್ಯಾರ್ಥಿಗಳ ಶೈಕ್ಷಣಿಕ, ದೈಹಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದ್ದು, ಇತರೆ ಎಲ್ಲಾ ಶಾಲೆಗಳಿಗೆ ಮಾದರಿ ಶಾಲೆಯಾಗಬೇಕೆನ್ನುವ ಉದ್ದೇಶದಿಂದ, ಈ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಕುರಿತು ಜಿಲ್ಲಾಡಳಿತದ ವತಿಯಿಂದ ಸೂಕ್ತ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಹೇಳಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕೆ.ಪಿ.ಎಸ್ ಶಾಲೆಗಳ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತಕ್ಕೊಳಪಟ್ಟ ಪ್ರೌಢಶಾಲಾ ಮುಖ್ಯ ಶಿಕ್ಷಕರೊಂದಿಗೆ ನಡೆದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆ.ಪಿ.ಎಸ್ ಶಾಲೆಗಳ ಪ್ರಾಥಮಿಕ, ಪ್ರೌಢ ಶಾಲಾ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಶಾಲೆಗಳ ಶೈಕ್ಷಣಿಕ ಪ್ರಗತಿ ಹಾಗೂ ಮೂಲಭೂತ ಸೌಕರ್ಯ, ಶಿಕ್ಷಕರ ಕೊರತೆ ಕುರಿತು ಮಾಹಿತಿ ಪಡೆದ ಜಿಲ್ಲಾ ಪಂಚಾಯತ್ ಸಿಇಓ, ಕೆ.ಪಿ.ಎಸ್ ಶಾಲೆಗಳು ಶೈಕ್ಷಣಿಕ ಮೌಲ್ಯಮಾಪನ ಕಮಿಟಿ ರಚಿಸಿ, ಚೆಕ್‌ಲಿಸ್ಟ್ ತಯಾರಿಸಿ ಪ್ರತೀ 15 ದಿನಗಳಿಗೆ ಪರಿಶೀಲನೆ ನಡೆಸುವಂತೆ ತಿಳಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತಕ್ಕೊಳಪಟ್ಟ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿದ್ದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ವಸತಿ ಸೌಲಭ್ಯದೊಂದಿಗೆ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದರು.
ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಹಾಗೂ ನಿಧಾನಕಲಿಕೆಯ ವಿದ್ಯಾರ್ಥಿಗಳಿಗೆ ಸಂಜೆ ವಿಶೇಷ ತರಗತಿಗಳನ್ನು ನಡೆಸಲು ಕ್ರಮವಹಿಸುವುದರೊಂದಿಗೆ ಗೈರು ಹಾಜರಾಗುವ ಮತ್ತು ನಿಧಾನಕಲಿಕೆ ಮಕ್ಕಳ ಪೋಷಕರ ಸಹಕಾರ ಪಡೆದು ಅತ್ಯುತ್ತಮ ಫಲಿತಾಂಶ ದಾಖಲಿಸಲು ಪ್ರತೀ ಶಾಲೆಯವರು ಯೋಜನೆ ರೂಪಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಪ್ರಭಾರ) ಗೋವಿಂದ ಮಡಿವಾಳ, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಚಂದ್ರಾನಾಯ್ಕ್, ಕೆ.ಪಿ.ಎಸ್ ಶಾಲೆಗಳ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತಕ್ಕೊಳಪಟ್ಟ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!