Monday, February 24, 2025
Monday, February 24, 2025

ಕಟಪಾಡಿ: ಉಚಿತ ಪ್ರಾಣ ಯೋಗ ಶಿಬಿರ

ಕಟಪಾಡಿ: ಉಚಿತ ಪ್ರಾಣ ಯೋಗ ಶಿಬಿರ

Date:

ಕಟಪಾಡಿ, ಅ.15: ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಎಸ್.ವಿ.ಎಸ್. ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅ.15 ರಿಂದ 24ರ ವರೆಗೆ 10 ದಿನಗಳ ಕಾಲ ‘ಉಚಿತ ಪ್ರಾಣ ಯೋಗ ಶಿಬಿರ’ದ ಉದ್ಘಾಟನಾ ಕಾರ್ಯಕ್ರಮ ಕಟಪಾಡಿಯ ಮಹಿಳಾ ಮಂಡಲದ ಸಭಾಭವನದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಉಡುಪಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರಾದ ರಾಘವೇಂದ್ರ ಭಟ್, ವೆಂಕಟೇಶ್ ಮೇಹಂದಲೆ ಹಾಗೂ ಜಗದೀಶ್ ಕುಮಾರ್ ಉಪಸ್ಥಿತರಿದ್ದರು. ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಸತ್ಯೇಂದ್ರ ಪೈ ಶಿಬಿರವನ್ನು ಉದ್ಘಾಟಿಸಿದರು. ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಮಹೇಶ್ ಅಂಚನ್, ರವಿರಾಜ್ ಶೆಟ್ಟಿ ಉಪಸಿತರಿದ್ದರು. ಕಟಪಾಡಿ ಪತಂಜಲಿ ಯೋಗ ಕಕ್ಷೆಯ ರಾಜೇಶ್ ಕಾಮತ್, ರಾಮಚಂದ್ರ ಪೈ ಶಿಬಿರವನ್ನು ಆಯೋಜಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ನಾಗೇಶ್ ಕಾಮತ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!