Sunday, September 22, 2024
Sunday, September 22, 2024

ಪಡುಕರೆ- ಸಂವಿಧಾನ ಸಂಪುಟ ಕೊಡುಗೆ

ಪಡುಕರೆ- ಸಂವಿಧಾನ ಸಂಪುಟ ಕೊಡುಗೆ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣಗೈದ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವ್ಕರ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಯುವಜನಾಂಗ ಸಂವಿಧಾನ – ಸಂವಿಧಾನದಲ್ಲಿ ಉಲ್ಲೇಖಿತ ತಾತ್ವಿಕ-ಜೀವನ ಮೌಲ್ಯಗಳು, ಪ್ರಜೆಗಳ ಹಕ್ಕು ಕರ್ತವ್ಯಗಳ ಕುರಿತಾಗಿ ಮನಃಪೂರ್ವಕವಾಗಿ ಅಧ್ಯಯನ ಮಾಡಬೇಕು ಮತ್ತು ಸಂವಿಧಾನದ ಆಶೋತ್ತರಗಳಿಗೆ ಅನುಗುಣವಾಗಿ ಭಾರತ ನಿರ್ಮಾಣದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ 2020-21ನೇ ಸಾಲಿನ ಬಿ.ಎ ವಿದ್ಯಾರ್ಥಿಗಳು ಭಾರತ ಸಂವಿಧಾನದ ರಚನಾ ಸಭೆಯ ಚರ್ಚೆ, ನಡಾವಳಿಗಳು ಮತ್ತು ಸಂಪೂರ್ಣ ಸಂವಿಧಾನದ 10 ಸಂಪುಟಗಳನ್ನು ಕಾಲೇಜಿನ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು.

ಬೆಂಗಳೂರಿನ ಉದ್ಯಮಿ ದಿನಕರ್ ಶೆಟ್ಟಿ ದಾಸ ಸಾಹಿತ್ಯದ 10 ಸಾವಿರ ಗೀತೆಗಳನ್ನೊಳಗೊಂಡ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಕಾಲೇಜಿನ ಬೋಧಕ-ಬೋಧಕೇತರ ವೃಂದ, ರೋವರ್-ರೇಂಜರ್, ಎನ್.ಎಸ್.ಎಸ್ ಹಾಗೂ ರೆಡ್‌ಕ್ರಾಸ್ ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!