Monday, February 24, 2025
Monday, February 24, 2025

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ: ನೋಂದಣಿಗೆ ಸೂಚನೆ

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ: ನೋಂದಣಿಗೆ ಸೂಚನೆ

Date:

ಉಡುಪಿ, ಅ.19: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ 5,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಎರಡನೇ ಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6,000 ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು. ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿ ಮಹಿಳೆಯರು ಪೂರಕ ಆಹಾರ ಪಡೆಯಲು ಹಾಗೂ ಆರೋಗ್ಯವಂತ ಮಗುವಿನ ಜನನಕ್ಕೆ ಮತ್ತು ಪಾಲನೆಗೆ ಸಹಕಾರಿಯಾಗಲಿದೆ. ಮೊದಲನೇ ಪ್ರಸವದ ಗರ್ಭಿಣಿ/ ಬಾಣಂತಿಗೆ ಮೊದಲನೇ ಕಂತಿನಲ್ಲಿ 3,000 ರೂ. ಗಳನ್ನು ಗರ್ಭಧಾರಣೆ ಖಾತರಿ ನಂತರ, ಮೊದಲನೇ ಪ್ರಸವದ ಬಾಣಂತಿಗೆ ಎರಡನೇ ಕಂತಿನಲ್ಲಿ 2,000 ರೂ. ಗಳನ್ನು ಮಗು ಜನಿಸಿದ ನಂತರ ಹಾಗೂ ಎರಡನೇ ಪ್ರಸವದ ಹೆಣ್ಣು ಮಗು ಜನಿಸಿದ 3 ತಿಂಗಳ ನಂತರದಲ್ಲಿ 6,000 ರೂ. ಗಳನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಮೂಲಕ ಫಲಾನುಭವಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ / ಜಾತಿ ಮತ್ತು ಆದಾಯ ಪ್ರಮಾಣ ಪತ್ರ/ ನರೇಗಾ ಕಾರ್ಡ್/ ಇ-ಶ್ರಮ್ ಕಾರ್ಡ್/ ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದರ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮೇಲ್ವಿಚಾರಕಿ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!