Monday, February 24, 2025
Monday, February 24, 2025

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ವಿಜೇತರಿಗೆ ಅಭಿನಂದನೆ

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ವಿಜೇತರಿಗೆ ಅಭಿನಂದನೆ

Date:

ಉಡುಪಿ: ಕರಾಟೆ ಬುಡೋಕೋನ್ ಇದರ ವತಿಯಿಂದ ಗದಗದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಶಿಪ್ ಪಡೆದ ಪರ್ಕಳ ಪಿಕೆಎಸ್ ಕರಾಟೆ ತಂಡಕ್ಕೆ ಅಭಿನಂದನಾ ಸಮಾರಂಭ ಇಂದು ನಡೆಯಿತು. ರೋಟರಿ ಕ್ಲಬ್ ಮಣಿಪಾಲ ವತಿಯಿಂದ ಕರಾಟೆ ತಂಡಕ್ಕೆ ಆರ್ಥಿಕ ನೆರವು ನೀಡಲಾಯಿತು.

ರೋಟರಿ ಅಧ್ಯಕ್ಷ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ಮಕ್ಕಳ ಸಾಧನೆ ಅಭಿನಂದನಾರ್ಹ. ಕರಾಟೆ ಶಿಕ್ಷಣದ ಮೂಲಕ ಆತ್ಮಸ್ಥೈರ್ಯ ಬೆಳೆಸಬಹುದು. ಮುಂದಿನ ಜೀವನದಲ್ಲಿ ಯಾವುದೇ ರೀತಿಯ ದುರಭ್ಯಾಸಗಳಿಗೆ ಒಳಗಾಗದೆ ಹೆಚ್ಚಿನ ಸಾಧನೆ ಮಾಡಬೇಕು. ಮಕ್ಕಳಿಗೆ ಬೆಂಬಲ, ಪ್ರೋತ್ಸಾಹ ನೀಡಿದ್ದಲ್ಲಿ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡಬಹುದು ಎಂದರು.

ಮುಖ್ಯ ಅತಿಥಿಗಳಾಗಿ ಡಾ. ಗಿರಿಜಾ ಮಾತನಾಡಿ, ಕರಾಟೆ ಕೇವಲ ದೈಹಿಕ ರಕ್ಷಣೆಯ ಕ್ರೀಡೆಯಲ್ಲ, ಅದು ಮನಸ್ಸನ್ನು ಕೇಂದ್ರಿಕರಣ ಮಾಡುವ ಆಟವಾಗಿದೆ ಎಂದರು. ಕರಾಟೆ ಶಿಕ್ಷಕಿ ಪ್ರವೀಣ ಸುವರ್ಣ, ಡಾ. ವೀಣಾ, ರಹಿಮಾನ್, ಶ್ರೀಪತಿ, ಕರ್ನಲ್ ಮಾಧವ ಶಾನುಭಾಗ್, ರಾಘವೇಂದ್ರ ಪ್ರಭು ಕರ್ವಾಲು, ಮುಂತಾದವರು ಉಪಸ್ಥಿತರಿದ್ದರು.   

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!