Friday, September 20, 2024
Friday, September 20, 2024

ಯುಪಿಎಂಸಿ ಕವಿಗೋಷ್ಠಿ ಸಂಪನ್ನ

ಯುಪಿಎಂಸಿ ಕವಿಗೋಷ್ಠಿ ಸಂಪನ್ನ

Date:

ಉಡುಪಿ, ಅ.21: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ ಕನ್ನಡ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯು ಉದ್ಘಾಟನೆಗೊಂಡು, ಕವಿಗೋಷ್ಠಿಯೊಂದಿಗೆ ಸಂಪನ್ನಗೊಂಡಿತು. ಕಾಲೇಜಿನ ಪ್ರಾಚಾರ್ಯೆ ಆಶಾಕುಮಾರಿ ಉದ್ಘಾಟಿಸಿ ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ ಮೂಡುತ್ತದೆ ಎಂದು ತಿಳಿಸಿದರು. ಕ.ಸಾ.ಪ ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ ಮನೋಹರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಉಡುಪಿ ತಾಲ್ಲೂಕಿನ ಕ.ಸಾ.ಪ ಅಧ್ಯಕ್ಷ ಹಾಗೂ ಕಾಲೇಜು ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರವಿರಾಜ್ ಹೆಚ್.ಪಿ ಮಾತನಾಡುತ್ತಾ, ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕಥೆ, ಕವನಗಳನ್ನು ರಚಿಸಲು ಒಲವು ತೋರಿದ್ದಲ್ಲಿ ಮುಂದೆ ಸಾಮಾಜಿಕ ವೇದಿಕೆಯಲ್ಲಿ ಉತ್ತಮ ಕವಿ ಮತ್ತು ಲೇಖಕರಾಗಿ ಮೂಡಿಬರಲು ಸಾಧ್ಯ ಎಂದು ತಿಳಿಸಿದರು.
ಹಿರಿಯಡ್ಕದ ಕವಯಿತ್ರಿ ಪೂರ್ಣಿಮಾ ಸುರೇಶ್ ಕವಿಗೋಷ್ಠಿಯ ಆಶಯ ಭಾಷಣದಲ್ಲಿ ಕವಿತೆಯ ಮೂಲಕ ಭಾವನೆಗಳನ್ನು ಪ್ರಕಟ ಮಾಡುವವರು ಕವಿಗಳು, ಬಾಲ್ಯದಿಂದ ಮುಪ್ಪಿನವರೆಗೆ ಅನುಭವಿಸುವ ಅನುಭವಗಳನ್ನು ಕಾವ್ಯದಲ್ಲಿ ಬಿತ್ತರಿಸುತ್ತದೆ, ಒಳನೋಟ ಕಾಣಲು ನಮ್ಮಲ್ಲಿ ಭಾವನೆಗಳು ಬೇಕು ಎಂದು ನುಡಿದರು.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಿ ಹಾಗೂ ರಂಗನಟ ರಾಜೇಶ್ ಭಟ್ ಪಣಿಯಾಡಿ ವಹಿಸಿಕೊಂಡು, ಯುಪಿಎಂಸಿ ಕೇವಲ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಶಿಕ್ಷಣ ನೀಡುತ್ತಿದ್ದರೂ ಇಲ್ಲಿನ ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿಯನ್ನು ಶ್ಲಾಘಸಿ, ಕವಿತೆ ಹುಟ್ಟಲು ಜಾಗ, ಪ್ರಕೃತಿ, ಏಕಾಂತ, ನೋವು, ರೋಷ, ಭಾವಾ ಬೇಕಾಗುತ್ತದೆ, ಭಾವನೆಗಳನ್ನು ಬಿತ್ತರಿಸಲು ಕವಿತೆ ಸಾಧನಾ ಎಂದು ತಿಳಿಸಿದರು. ಸಾಹಿತಿ ನಾರಾಯಣ ಮಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರೇಮಸಾಯಿ, ಕಾವ್ಯ ಶೆಟ್ಟಿ, ರಕ್ಷಿತಾ, ಆಶಿಕಾ, ಸ್ನೇಹಾ, ಸಿಂಚನಾ, ಅದೀಶಾ, ಕೃತಿಕಾ, ನಂದೀಶ್ ಕವನಗಳನ್ನು ರಚಿಸಿ ವಾಚಿಸಿದರು. ಕನ್ನಡ ಉಪನ್ಯಾಸಕ ಶಶಿಕಾಂತ್ ಶೆಟ್ಟಿ ಸ್ವಾಗತಿಸಿ, ಕವಿಗೋಷ್ಠಿಯ ಸಂಚಾಲಕ ರಾಘವೇಂದ್ರ ಜಿ.ಜಿ ವಂದಿಸಿದರು. ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ ಸಭಾ ಕಾರ್ಯಕ್ರಮ ಹಾಗೂ ಕ.ಸಾ.ಪ ಉಡುಪಿ ತಾಲ್ಲೂಕಿನ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಕವಿಗೋಷ್ಠಿಯನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!