Monday, February 24, 2025
Monday, February 24, 2025

ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತಿ

ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತಿ

Date:

ಉಡುಪಿ, ಅ.28: ಮಹರ್ಷಿ ವಾಲ್ಮೀಕಿ ಸಂಘ ಉಡುಪಿ ಜಿಲ್ಲೆ, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ತಾಲೂಕು ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಅತಿಥಿಗಳಾಗಿ ಆಗಮಿಸಿದ್ದ ಕುಶಾಲ್ ಅಮೀನ್, ಅ ರಾ ಪ್ರಭಾಕರ ರಾಜ್ ಮತ್ತು ವಿಶ್ವನಾಥ ರೆಡ್ಡಿ ಬಿರಾದಾರ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮತ್ತು ಮಹರ್ಷಿ ವಾಲ್ಮೀಕಿ ಸಂಘ ಉಡುಪಿ ಜಿಲ್ಲೆಯ ಸರ್ವ ಸದಸ್ಯರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅ ರಾ ಪ್ರಭಾಕರ ರಾಜ್ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ಅತ್ಯಂತ ತಳಮಟ್ಟದ ಸಮುದಾಯದಲ್ಲಿ ಹುಟ್ಟಿ ದೇಶಕ್ಕೆ ಅತ್ಯುನ್ನತ ಎನ್ನುವಂತಹ 2400 ಪುಟಗಳ ರಾಮಾಯಣವನ್ನು ನಮ್ಮೆಲ್ಲರಿಗೂ ಕೊಟ್ಟಂತಹ ಮಹಾನ್ ವ್ಯಕ್ತಿ, ಅಂತಹ ಮಹಾನ್ ಕವಿ ಮಹರ್ಷಿ ವಾಲ್ಮೀಕಿಯವರ ಸಂಘವನ್ನು ಇನ್ನಷ್ಟು ಬಲಗೊಳಿಸಲು ನಾವೆಲ್ಲರೂ ಜೊತೆಯಾಗೋಣ ಎಂದು ಶುಭ ಹಾರೈಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಕುಶಾಲ್ ಅಮೀನ್, ವಿಶ್ವ ಹಿಂದೂ ಪರಿಷತ್ ಭಜರಂಗದಳ ಉಡುಪಿ ಜಿಲ್ಲೆಯ ನಗರ ಉಪಾಧ್ಯಕ್ಷ ವಿಶ್ವನಾಥ್ ರೆಡ್ಡಿ, ಬಿರಾದಾರ್ ಶುಭ ಹಾರೈಸಿದರು.

ಮಹರ್ಷಿ ವಾಲ್ಮೀಕಿ ಸಂಘದ ಪ್ರಮುಖರಾದ ಪಂಪೇಷ್, ಗೋಪಾಲ್ ದೇವದುರ್ಗ, ಆನಂದ್ ವಾಲ್ಮೀಕಿ, ಶಿವರಾಜ್ ವಾಲಿಕಾರ, ಗೋಪಾಲ್ ದೊರೆ, ಸಿದ್ದಣ್ಣ ಎಸ್ ಪೂಜಾರಿ, ಸಿದ್ದು, ಶರಣು ದೊರೆ, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘದ ಗೌರವ ಮಾರ್ಗದರ್ಶಕರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!