Wednesday, February 26, 2025
Wednesday, February 26, 2025

ಗಂಗೊಳ್ಳಿ: ಕನ್ನಡ ರಾಜ್ಯೋತ್ಸವ

ಗಂಗೊಳ್ಳಿ: ಕನ್ನಡ ರಾಜ್ಯೋತ್ಸವ

Date:

ಉಡುಪಿ, ನ.1: ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು. ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, ಗಣೇಶ, ಭಾಸ್ಕರ ಪೂಜಾರಿ, ಆನಂದ ಪೂಜಾರಿ, ನಾಗರಾಜ ಶೇರುಗಾರ್, ಯಶವಂತ ಖಾರ್ವಿ, ನಾಗರಾಜ್ ಶೇರುಗಾರ್, ಭಾಸ್ಕರ ಬಿಲ್ಲವ, ಲಕ್ಷ್ಮಣ ಬಿಲ್ಲವ, ಗೋವಿಂದ ನಾಯಕ್, ಸಂತೋಷ ಖಾರ್ವಿ, ಅಶೋಕ ಖಾರ್ವಿ, ಅಂತೋನಿ, ಸುರೇಶ್ ಜಿ, ಶಂಕರ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕ ಕರಾವಳಿ ನಾಗರಿಕ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ಕೊಡೇರಿ ಮನೆ ಸ್ವಾಗತಿಸಿದರು. ಸರಸ್ವತಿ ವಿದ್ಯಾಲಯದ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ ವಂದಿಸಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕನ್ನಡ ಗೀತೆಗಳನ್ನು ಹಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ, ಫೆ.26: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ...

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...
error: Content is protected !!