Wednesday, February 26, 2025
Wednesday, February 26, 2025

ಜಾದೂ ಕಲೆಯನ್ನು ಸಾಮಾಜಿಕ ಉದ್ದೇಶಗಳಿಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು: ಪ್ರೊ.ಶಂಕರ್

ಜಾದೂ ಕಲೆಯನ್ನು ಸಾಮಾಜಿಕ ಉದ್ದೇಶಗಳಿಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು: ಪ್ರೊ.ಶಂಕರ್

Date:

ಮಣಿಪಾಲ, ನ.1: ಜಾದೂ ಕಲೆಯನ್ನು ಸಾಮಾಜಿಕ ಉದ್ದೇಶಗಳಿಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂದು ಖ್ಯಾತ ಜಾದೂಗಾರ ಪ್ರೊ.ಶಂಕರ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ‘ಕ್ರಿಯೇಟಿವ್ ಅಕಾಡೆಮಿಕ್ ಕ್ಲಬ್‌’ ಗಳ ‘ಕಥಾರ್ಟಿಸ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಪ್ರೊ.ಶಂಕರ್, ಜಾದೂ ಕೇವಲ ಮನರಂಜನೆಗಾಗಿ ಮಾತ್ರವಲ್ಲ, ಸಾಮಾಜಿಕ ಸಂದೇಶಗಳನ್ನು ರವಾನಿಸಲು ಬಳಸಬಹುದಾಗಿದೆ ಎಂದರು. ಅವರು ವ್ಯಸನ-ವಿರೋಧಿ ಮ್ಯಾಜಿಕ್ ಪ್ರದರ್ಶನಗಳು ಸೇರಿದಂತೆ ತಮ್ಮದೇ ಆದ ಮ್ಯಾಜಿಕ್ ಪ್ರಯೋಗಗಳನ್ನು ಉಲ್ಲೇಖಿಸಿದರು. ವಿದ್ಯಾರ್ಥಿಗಳ ಈ ಚಟುವಟಿಕೆಗಳು ಪಠ್ಯಕ್ಕೆ ಪೂರಕವಾಗಿದೆ ಎಂದು ಶ್ಲಾಘಿಸಿದರು.

ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಮೊಲೆಕ್ಯುಲರ್ ಫಿಸಿಸಿಸ್ಟ್ ಡಾ.ಸೂರ್ಯ ಹರಿಕೃಷ್ಣನ್ ಅವರು ವಿಜ್ಞಾನದ ವಿದ್ಯಾರ್ಥಿಗಳಿಗೂ ದೊರಕಬೇಕಾದ ಕಲೆಯ ಅಗತ್ಯವನ್ನು ಒತ್ತಿ ಹೇಳಿದರು. ಬಯೋಕೆಮಿಸ್ಟ್ ಡಾ ಸಂಬಿತ್ ದಾಶ್ ಅವರು ಕಥಾರ್ಸಿಸ್ ಗಾಗಿ ಒದಗಬೇಕಾದ ಸಾಂಸ್ಕೃತಿಕ ವೇದಿಕೆಗಳ ಅಗತ್ಯವನ್ನು ಒತ್ತಿ ಹೇಳಿದರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಕಥಾ, ಆರ್ಟ್ ಮತ್ತು ಕಥಾರ್ಸಿಸ್ ಎಂಬ ಪದವು ‘ಕಥಾರ್ಟಿಸ್’ ಪದಕ್ಕೆ ಹೇಗೆ ಸ್ಫೂರ್ತಿಯಾಯಿತು ಎಂಬುದನ್ನು ವಿವರಿಸಿದರು. ಕಲಾವಿದರ ವಿಶಾಲ ವರ್ಗವನ್ನು ಅರ್ಥೈಸಲು ಕಥಾರ್ಟಿಸ್ಟ್ ಎಂದೂ ಇದನ್ನು ವಿಸ್ತರಿಸಬಹುದು ಎಂದರು. ಜಿಸಿಪಿಎಎಸ್ ನ ವಿದ್ಯಾರ್ಥಿಗಳು ಸಂಗೀತ, ಸಾಹಿತ್ಯ, ಜೆಂಡರ್, ದೃಶ್ಯ ಕಲೆಗಳು, ಶಾಂತಿ, ಸಿನಿಮಾ, ತತ್ವಶಾಸ್ತ್ರ, ಕ್ರೀಡೆ, ಪರಿಸರ, ರಂಗಭೂಮಿ ಮತ್ತು ನೃತ್ಯ ಕ್ಕೆ ಸಂಬಂದಿಸಿದ ಅನೇಕ ಚಟುವಟಿಕೆಗಳನ್ನು ಕೈಗೊಂಡರು. ಅಪರ್ಣಾ ಪರಮೇಶ್ವರನ್ ಚಟುವಟಿಕೆಗಳನ್ನು ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!