Tuesday, February 25, 2025
Tuesday, February 25, 2025

ಕನ್ನಡ ಶಾಲೆಯ ಮಹತ್ವ ಪಸರಿಸುವ ಕಾರ್ಯ ಶ್ಲಾಘನೀಯ: ಪುರುಷೋತ್ತಮ ದೇವಾಡಿಗ

ಕನ್ನಡ ಶಾಲೆಯ ಮಹತ್ವ ಪಸರಿಸುವ ಕಾರ್ಯ ಶ್ಲಾಘನೀಯ: ಪುರುಷೋತ್ತಮ ದೇವಾಡಿಗ

Date:

ಕೋಟ, ನ.2: ಕನ್ನಡ ನಾಡು ನುಡಿ ಬಗ್ಗೆ ನಮ್ಮಲ್ಲಿ ಗೌರವ ಬೆಳೆಸಿಕೊಳ್ಳಬೇಕು, ಅದರ ಜೊತೆಗೆ ನಾವು ಕಲಿತ ಕನ್ನಡ ಶಾಲೆಯ ಬಗ್ಗೆ ವಿಶೇಷ ಕಾಳಜಿಯೊಂದಿಗೆ ಅಭಿವೃದ್ಧಿಗೆ ಜೊತೆಯಾಗಬೇಕು. ಕನ್ನಡ ಶಾಲೆಯ ಮಹತ್ವ ಸಾರುವ ವಿಡಿಯೋ ಸಾಕಷ್ಟು ಪ್ರಸಿದ್ಧಿ ಪಡೆದು ನಮ್ಮ ಶಾಲೆಯ ಹೆಸರಿನ ಕೀರ್ತಿ ಬೆಳಗಿಸಿದ ತಂಡಕ್ಕೆ ಅಭಿನಂದನೆಗಳು. ಇನ್ನಷ್ಟು ಕನ್ನಡ ಶಾಲೆಯ ಮಹತ್ವ ಸಾರುವ ಹೊಸ ಪ್ರಯತ್ನಗಳು ನಡೆಯುತ್ತಿರಲಿ ಎಂದು ಸಾಯ್ಬ್ರಕಟ್ಟೆ ಸ.ಹಿ.ಪ್ರಾ.ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಪುರುಷೋತ್ತಮ ದೇವಾಡಿಗ ಹೇಳಿದರು.

ಅವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ವತಿಯಿಂದಕನ್ನಡ ಶಾಲೆಯ ಮಹತ್ವ ಸಾರುವ ‘ನಾನು ಹರ್ಷಿಣಿ’ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೊಸ ಕ್ರಾಂತಿ ಮೂಡಿಸಿದ ತಂಡದ ಸಾಯ್ಬ್ರಕಟ್ಟೆ ಸ.ಹಿ.ಪ್ರಾ.ಶಾಲೆಯ ಶಿಕ್ಷಕ ಸುರೇಂದ್ರ ಕೋಟ, ವಿದ್ಯಾರ್ಥಿಗಳಾದ ಪ್ರಣಿತಾ , ಪುನೀತಾ, ಅಧ್ವಿಕ್ ಎಸ್., ರೀತ್ವಿನ್ ಅವರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ಸಾಯ್ಬ್ರಕಟ್ಟೆ ಸ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ಜಯಂತಿ, ಹಾಗೂ ಶಿಕ್ಷಕ ವೃಂದ, ಶ್ರೀ ವಿನಾಯಕ ಯುವಕ ಮಂಡಲದ ಸದಸ್ಯರು, ಜನನಿ ಕನ್ನಡ ಸಂಘ ಸಾಯ್ಬ್ರಕಟ್ಟೆಯ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!