Monday, February 24, 2025
Monday, February 24, 2025

ತೆಂಕನಿಡಿಯೂರು ಕಾಲೇಜು: ಉನ್ನತಿ ಜೀವನ ಕೌಶಲ ವೃತ್ತಿಪರ ತರಬೇತಿ ಸಮಾರೋಪ

ತೆಂಕನಿಡಿಯೂರು ಕಾಲೇಜು: ಉನ್ನತಿ ಜೀವನ ಕೌಶಲ ವೃತ್ತಿಪರ ತರಬೇತಿ ಸಮಾರೋಪ

Date:

ಮಲ್ಪೆ, ನ.2: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 30 ದಿನಗಳ ಔದ್ಯೋಗಿಕ, ಕೌಶಲಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಇಂತಹ ತರಬೇತಿಗಳು ಭವಿಷ್ಯದಲ್ಲಿ ತಮ್ಮ ವೃತ್ತಿ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಉನ್ನತಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಇಂತಹ ತರಬೇತಿಯನ್ನು ಕೊಡುತ್ತಿದೆ. ಇದು ಆರಂಭ ಅಪ್ಟೇ, ವಿದ್ಯಾರ್ಥಿಗಳು ಇದನ್ನು ಮುಂದುವರಿಸಬೇಕು ಎಂದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ದಿನೇಶ್ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ತರಬೇತಿಯು ಸ್ಪೋಕನ್ ಇಂಗ್ಲೀಷ್, ನಾಯಕತ್ವ ತರಬೇತಿ, ಸಂವಹನ ಕಲೆ, ಜೀವನ ಕೌಶಲ, ಸಂದರ್ಶನ ಎದುರಿಸುವ ಕಲೆ, ಸಮಯ ನಿರ್ವಹಣೆ, ಸಮೂಹ ಚರ್ಚೆ, ಭಾಷಣ ಕಲೆ, ವೃತ್ತಿ ಜೀವನಕ್ಕೆ ತಯಾರಿ ಮುಂತಾದ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಖಾತರಿಯನ್ನು ಉನ್ನತಿ ಯುನೆಕ್ಸ್ಟ್ ತರಬೇತಿ ಸಂಸ್ಥೆಯ ವತಿಯಿಂದ
ನೀಡಲಾಗುತ್ತದೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ತರಬೇತಿ ಪಡೆದ ಇ-ಸರ್ಟಿಫಿಕೇಟ್‌ಗಳನ್ನು ನೀಡಲಾಯಿತು.

ಉನ್ನತಿ ಯುನೆಕ್ಸ್ಟ್ ಸಂಸ್ಥೆಯ ತರಬೇತುದಾರರಾದ ಗುರುಪ್ರಸಾದ್ ಭಟ್, ಶೈಕ್ಷಣಿಕ ಸಂಚಾಲಕರಾದ ಡಾ. ಪ್ರಸಾದ್ ರಾವ್ ಎಂ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ, ಇತರ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಶಾಕಿತಾ ಸ್ವಾಗತಿಸಿ, ಸುಮಾ ವಂದಿಸಿದರು. ನಿತೀಶ್ ಮತ್ತು ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!