Saturday, October 19, 2024
Saturday, October 19, 2024

ಪತ್ರಕರ್ತರಾದ ಶೇಖರ್ ಅಜೆಕಾರ್- ಶಶಿಧರ್ ಹೆಮ್ಮಣ್ಣಗೆ ಶ್ರದ್ಧಾಂಜಲಿ ಸಭೆ

ಪತ್ರಕರ್ತರಾದ ಶೇಖರ್ ಅಜೆಕಾರ್- ಶಶಿಧರ್ ಹೆಮ್ಮಣ್ಣಗೆ ಶ್ರದ್ಧಾಂಜಲಿ ಸಭೆ

Date:

ಉಡುಪಿ, ನ.11: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬರಹದ ಹುಚ್ಚಿನ ದಾರಿಯ ಬದುಕು ಯಾವತ್ತೂ ಸುಲಭ ಅಲ್ಲ. ಬಹಳ ಸವಾಲು, ಸಂಕಷ್ಟ ಎದುರಿಸಿಯೇ ಮುಂದೆ ಹೆಜ್ಜೆ ಇಡಬೇಕಾಗುತ್ತದೆ. ಪತ್ರಕರ್ತರು ಸವಾಲುಗಳನ್ನು ಒಡ್ಡಿ ಸಮಾಜದ ಮುಂದೆ ತಮ್ಮನ್ನು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬರಹದ ಹುಚ್ಚಿನಿಂದ ಪತ್ರಕರ್ತ ವ್ಯಕ್ತಿಯಾಗಿ ಬೆಳೆಯಬಹುದೇ ಹೊರತು ಆರ್ಥಿಕವಾಗಿ ಬೆಳೆಯುವುದು ಕಷ್ಟ ಎಂದು ಹೇಳಿದರು.

ಶೇಖರ್ ಅಜೆಕಾರು ಸಾಮಾಜಿಕ ಬದುಕಿನಲ್ಲಿ ಆಳವಾದ ಅಧ್ಯಯನ ಮಾಡಿದ್ದಾರೆ. ಶಶಿಧರ್ ಹೆಮ್ಮಣ್ಣ ಅವರ ಬರವಣಿಗೆ ವಾಸ್ತವ್ಯ ಸ್ಥಿತಿಗೆ ಬಹಳಷ್ಟು ಹತ್ತಿರವಾಗಿರುತ್ತದೆ. ಇಬ್ಬರದ್ದು ಸಾಯುವ ವಯಸ್ಸು ಅಲ್ಲ. ಆರೋಗ್ಯವಾಗಿರುತ್ತಿದ್ದರೆ ಇನ್ನಷ್ಟು ವರ್ಷ ಬದುಕಲು ಬೇಕಾದ ಅವಕಾಶಗಳು ಇರುತ್ತಿತ್ತು. ಎಲ್ಲರ ಒಳಗೊಂಡ ಸಾಮಾಜ ಕಟ್ಟು ಅವರ ಕಲ್ಪನೆಗೆ ಇನ್ನಷ್ಟು ಶಕ್ತಿ ಬರುತ್ತಿತ್ತು ಎಂದರು.

ಉಡುಪಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಾಜಿ ಅಧ್ಯಕ್ಷ ಗೋಕುಲ್‌ದಾಸ್ ಪೈ, ಹಿರಿಯ ಉಪಸಂಪಾದಕ ಕರುಣಾಕರ್, ಪತ್ರಕರ್ತರಾದ ದೀಪಕ್ ಜೈನ್, ಶಶಿಧರ್ ಮಾಸ್ತಿಬೈಲು ನುಡಿನಮನ ಸಲ್ಲಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಉತ್ತರ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಶಿವಕುಮಾರ್, ಕೆಮ್ಮಣ್ಣು ಗ್ರಾಪಂ ಕಾರ್ಯದರ್ಶಿ ದಿನಕರ ಬೆಂಗ್ರೆ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!