Friday, September 20, 2024
Friday, September 20, 2024

ಆರೋಗ್ಯಕರ ಜೀವನಕ್ಕೆ ನಿರಂತರ ಯೋಗಾಭ್ಯಾಸ ಅಗತ್ಯ: ಕೆ. ಸತ್ಯೇಂದ್ರ‌ ಪೈ

ಆರೋಗ್ಯಕರ ಜೀವನಕ್ಕೆ ನಿರಂತರ ಯೋಗಾಭ್ಯಾಸ ಅಗತ್ಯ: ಕೆ. ಸತ್ಯೇಂದ್ರ‌ ಪೈ

Date:

ಕಟಪಾಡಿ, ನ.13: ಪತಂಜಲಿ ಯೋಗ ಸಮಿತಿ ಉಡುಪಿ ಕಟಪಾಡಿ ಕಕ್ಷೆ ವತಿಯಿಂದ ಕಟಪಾಡಿ ಇನ್ವೆಂಜರ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ವಿಶೇಷ ವಾಗಿ ಹಣತೆ ದೀಪಗಳೊಂದಿಗೆ ಯೋಗ ದೀಪಾವಳಿ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಲ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಟಪಾಡಿ ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ.ಸತ್ಯೇಂದ್ರ‌ ಪೈ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನಾತನ ಹಿಂದೂ ಧರ್ಮದಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ಮಾನ್ಯತೆ ನೀಡಲಾಗಿದೆ. ಕತ್ತಲೆಯಿಂದ ಬೆಳಕಿನೆಡೆಗೆ ಸಾಗುವಲ್ಲಿ ಬೆಳಕು ಎಷ್ಟು ಪ್ರಾಮುಖ್ಯವೋ, ಆರೋಗ್ಯಕರ ಜೀವನ ಸಾಗಿಸುವಲ್ಲಿ ನಿರಂತರ ಯೋಗಾಭ್ಯಾಸ ಕೂಡಾ ಅತೀ ಅಗತ್ಯ ಎಂದರು.

ಪತಂಜಲಿ ಯೋಗ ಸಮಿತಿ ಕಟಪಾಡಿ ಕಕ್ಷೆಯ ಯೋಗ ಶಿಕ್ಷಕ ರಾಜೇಶ್ ಕಾಮತ್ ದೀಪದ ಬೆಳಕಿನೊಂದಿಗೆ ಮಹತ್ವದ ಯೋಗಾಸನಗಳನ್ನು ಕಲಿಸಿಕೊಟ್ಟರು. ಸಹಶಿಕ್ಷಕ ರಾಮಚಂದ್ರ ಪೈ, ಶಿಬಿರಾರ್ಥಿಗಳಾದ ಪ್ರದೀಪ್ ಆರ್. ಶೆಟ್ಟಿ, ಅನುಪಮ ಪೈ, ಅರುಂಧತಿ ಕಾಮತ್, ನಂದಿನಿ ಶೆಣೈ, ಸುಧೀಂದ್ರ ಶೆಟ್ಟಿ ಪಾಂಗಳ, ಪ್ರವೀಣ್ ಭಕ್ತ, ಸಂಪತ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಕಟಪಾಡಿ ಸೃಷ್ಠಿ ಫೌಂಡೇಶನ್ ಅಧ್ಯಕ್ಷ ಪ್ರಕಾಶ ಸುವರ್ಣ ಕಟಪಾಡಿ ಸ್ವಾಗತಿಸಿ, ರಂಗನಟ ನಾಗೇಶ್ ಕಾಮತ್ ಕಟಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!