Monday, February 24, 2025
Monday, February 24, 2025

ನ.18: ಉಡುಪಿಯಲ್ಲಿ ಗುರುವಂದನ ಪೂರ್ವಭಾವಿ ಸಭೆ

ನ.18: ಉಡುಪಿಯಲ್ಲಿ ಗುರುವಂದನ ಪೂರ್ವಭಾವಿ ಸಭೆ

Date:

ಉಡುಪಿ, ನ. 16: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ವಿಶ್ವಸ್ಥರಾಗಿ ಇಡೀ ಉಡುಪಿಗೇ ಹೆಮ್ಮೆ ತಂದಿರುವ ಶ್ರೀ ಪೇಜಾವರ ಮಠಾಧೀಶಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಇದೀಗ ಸಾರ್ಥಕ ಜೀವನದ 60 ರ ಸಂಭ್ರಮ. ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಅನ್ವರ್ಥ ಶಿಷ್ಯರಾಗಿ ಅವರು ಹಾಕಿ ಕೊಟ್ಟ ಮಾರ್ಗದಲ್ಲೇ ಹೆಜ್ಜೆ ಹಾಕುತ್ತಾ ಗೋಸೇವೆ, ವೇದಶಾಸ್ತ್ರಾಧ್ಯಯನ ಅಧ್ಯಾಪನ , ಶಿಕ್ಷಣ ಆರೋಗ್ಯ, ದೀನಜನ ಶುಶ್ರೂಷೆ, ಧರ್ಮ ರಕ್ಷಣೆಯೇ‌ ಮೊದಲಾದ ಬಹುಮುಖಿ ಕಾರ್ಯ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸುತ್ತಾ ನಿರಂತರ ದೇಶ ಸಂಚಾರದ ಮೂಲಕ ಜನರಲ್ಲಿ ರಾಮಭಕ್ತಿ, ದೇಶಭಕ್ತಿಯ ಜಾಗೃತಿ ಮೂಡಿಸುತ್ತಿರುವ ಶ್ರೀಪಾದರ ಷಷ್ಠ್ಯಬ್ದಿ ಮಹೋತ್ಸವದ ಪ್ರಯುಕ್ತ ಅವರನ್ನು ಅಭಿವಂದಿಸುವುದು ಕೇವಲ ಅವರ ಶಿಷ್ಯರು ಭಕ್ತರು ಅಭಿಮಾನಿಗಳಿಗೆ ಮಾತ್ರವಲ್ಲದೇ ಉಡುಪಿಯ ಜನತೆಗೇ ಒದಗಿದ ಒಂದು ಭಾಗ್ಯ. ಈ ಕಾರ್ಯಕ್ರಮವನ್ನು ಜಿಲ್ಲೆಯ ಸಮಸ್ತ ನಾಗರಿಕರ ಸಹಕಾರ ಸಹಯೋಗವನ್ನು ಪಡೆದು ವೈಭವ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸಂಕಲ್ಪಿಸಲಾಗಿದೆ. ಈ ಉದ್ದೇಶಕ್ಕಾಗಿ ನವೆಂಬರ್ 18 ಶನಿವಾರ ಸಂಜೆ 5.30 ಕ್ಕೆ ಉಡುಪಿ ಅಜ್ಜರಕಾಡಿನ ಶ್ರೀ ಗೋವಿಂದ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಇದರಲ್ಲಿ ಶ್ರೀ ಪೇಜಾವರ ಮಠದ ಶ್ರೀಗಳವರ ಅಭಿಮಾನಿಗಳು ಭಕ್ತರು, ವಿದ್ವಾಂಸರು, ದೇವಸ್ಥಾನಗಳ ಧರ್ಮದರ್ಶಿಗಳು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಉದ್ಯಮಿಗಳು, ಭಜನಾ ಮಂಡಳಿ, ಹಿಂದು ಸಂಘಟನೆಗಳು, ವಿವಿಧ ಸಮಾಜ ಸೇವಾ ಸಂಸ್ಥೆಗಳು, ಜಾತಿ ಸಮುದಾಯಗಳ ಪ್ರತಿನಿಧಿಗಳು ಹಾಗೂ ಸಮಾನ‌ಮನಸ್ಕರು ಭಾಗವಹಿಸಿ ಸಲಹೆ ಸೂಚನೆಗಳನ್ನಿತ್ತು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!