Home ಸುದ್ಧಿಗಳು ಪ್ರಾದೇಶಿಕ ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ

ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ

215
0

ಉಡುಪಿ, ನ. 17: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30 ಶನಿವಾರ ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ.

ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.