Monday, February 24, 2025
Monday, February 24, 2025

ಬೇಂದ್ರೆ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ: ಡಾ. ಹೆಚ್. ಕೆ. ವೆಂಕಟೇಶ್

ಬೇಂದ್ರೆ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ: ಡಾ. ಹೆಚ್. ಕೆ. ವೆಂಕಟೇಶ್

Date:

ಉಡುಪಿ: ದ.ರಾ. ಬೇಂದ್ರೆಯವರದು ದಾರ್ಶನಿಕ ಪ್ರತಿಭೆ. ಎಲ್ಲಾ ರೀತಿಯ ಸಾಮಾಜಿಕ ವಿಚಾರಗಳನ್ನು ಅವರ ಕಾವ್ಯದಲ್ಲಿ ಅಭಿವ್ಯಕ್ತವಾಗಿದೆ. ಜಾನಪದ ಸೊಗಡು ಮತ್ತು ಆಧುನಿಕತೆಯ ಸ್ಪರ್ಶ ಎರಡನ್ನೂ ಅವರ ಕಾವ್ಯದಲ್ಲಿ ಗುರುತಿಸಬಹುದು. ಅವರೊಬ್ಬ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ ಎಂದು ಚಿಂತಕ ಡಾ. ಹೆಚ್.ಕೆ. ವೆಂಕಟೇಶ್ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಕನ್ನಡ ವಿಭಾಗ ಆಶ್ರಯದಲ್ಲಿ ನಡೆದ ಬೇಂದ್ರೆ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಬೇಂದ್ರೆಯವರ ಬಹುಮುಖ ವ್ಯಕ್ತಿತ್ವವನ್ನು ಪರಿಚಯಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಕಾಶ್ ಶೆಟ್ಟಿಯವರು ಪ್ರಸ್ತಾವಿಕವಾಗಿ ಮಾತನಾಡಿ ಬೇಂದ್ರೆಯವರ ಬಹುಕು ಬರಹಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುತ್ತದೆ ಎಂದರು.

ಕನ್ನಡ ವಿಭಾಗ ಅಧ್ಯಾಪಕರಾದ ಪ್ರೊ. ರಾಧಾಕೃಷ್ಣ, ರತ್ನಮಾಲಾ, ಶಾಲಿನಿ, ಅರ್ಚನಾ, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಉಪಸ್ಥಿತರಿದ್ದರು. ಕನ್ನಡ ವಿಭಾಗದ ನಿಖೀಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೇಂದ್ರೆ ಬದುಕು- ಬರಹದ ಬಗ್ಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!