Sunday, February 8, 2026
Sunday, February 8, 2026

ಬೇಂದ್ರೆ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ: ಡಾ. ಹೆಚ್. ಕೆ. ವೆಂಕಟೇಶ್

ಬೇಂದ್ರೆ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ: ಡಾ. ಹೆಚ್. ಕೆ. ವೆಂಕಟೇಶ್

Date:

ಉಡುಪಿ: ದ.ರಾ. ಬೇಂದ್ರೆಯವರದು ದಾರ್ಶನಿಕ ಪ್ರತಿಭೆ. ಎಲ್ಲಾ ರೀತಿಯ ಸಾಮಾಜಿಕ ವಿಚಾರಗಳನ್ನು ಅವರ ಕಾವ್ಯದಲ್ಲಿ ಅಭಿವ್ಯಕ್ತವಾಗಿದೆ. ಜಾನಪದ ಸೊಗಡು ಮತ್ತು ಆಧುನಿಕತೆಯ ಸ್ಪರ್ಶ ಎರಡನ್ನೂ ಅವರ ಕಾವ್ಯದಲ್ಲಿ ಗುರುತಿಸಬಹುದು. ಅವರೊಬ್ಬ ಕನ್ನಡದ ಅದ್ಭುತ ಕಾವ್ಯ ಪ್ರತಿಭೆ ಎಂದು ಚಿಂತಕ ಡಾ. ಹೆಚ್.ಕೆ. ವೆಂಕಟೇಶ್ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಕನ್ನಡ ವಿಭಾಗ ಆಶ್ರಯದಲ್ಲಿ ನಡೆದ ಬೇಂದ್ರೆ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಬೇಂದ್ರೆಯವರ ಬಹುಮುಖ ವ್ಯಕ್ತಿತ್ವವನ್ನು ಪರಿಚಯಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಕಾಶ್ ಶೆಟ್ಟಿಯವರು ಪ್ರಸ್ತಾವಿಕವಾಗಿ ಮಾತನಾಡಿ ಬೇಂದ್ರೆಯವರ ಬಹುಕು ಬರಹಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುತ್ತದೆ ಎಂದರು.

ಕನ್ನಡ ವಿಭಾಗ ಅಧ್ಯಾಪಕರಾದ ಪ್ರೊ. ರಾಧಾಕೃಷ್ಣ, ರತ್ನಮಾಲಾ, ಶಾಲಿನಿ, ಅರ್ಚನಾ, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಉಪಸ್ಥಿತರಿದ್ದರು. ಕನ್ನಡ ವಿಭಾಗದ ನಿಖೀಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೇಂದ್ರೆ ಬದುಕು- ಬರಹದ ಬಗ್ಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!