Saturday, September 21, 2024
Saturday, September 21, 2024

ಉಡುಪಿ: ತ್ಯಾಜ್ಯಗಳನ್ನು ವಿಂಗಡಿಸಿ, ಸ್ಥಳೀಯ ಸಂಸ್ಥೆಗಳ ವಾಹನಗಳಿಗೆ ನೀಡಲು ಸೂಚನೆ

ಉಡುಪಿ: ತ್ಯಾಜ್ಯಗಳನ್ನು ವಿಂಗಡಿಸಿ, ಸ್ಥಳೀಯ ಸಂಸ್ಥೆಗಳ ವಾಹನಗಳಿಗೆ ನೀಡಲು ಸೂಚನೆ

Date:

ಉಡುಪಿ, ನ.20: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಗೂಡಂಗಡಿ, ತಳ್ಳುಗಾಡಿ ಹಾಗೂ ಅಂಗಡಿ ಮಾಲೀಕರುಗಳು ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ವಿಂಗಡಿಸಿ, ಹಸಿಕಸ ಹಾಗೂ ಒಣಕಸಗಳಾಗಿ ಬೇರ್ಪಡಿಸಿ, ಶೇಖರಿಸಿ ನಗರ ಸ್ಥಳೀಯ ಸಂಸ್ಥೆಯ ವಾಹನಗಳಿಗೆ ನೀಡಬೇಕು ಹಾಗೂ ರಸ್ತೆ ಬದಿ ಓಡಾಡುವ ಹಿರಿಯ ನಾಗರಿಕಕರು, ವಿದ್ಯಾರ್ಥಿಗಳು, ಪಾದಾಚಾರಿಗಳಿಗೆ ಮತ್ತು ವಾಹನ ಸಂಚಾರಿಗಳಿಗೆ ಅಡ್ಡಿಪಡಿಸದೇ ವ್ಯವಹಾರ ಮಾಡಬೇಕು.

ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಬದಲಿಗೆ ಪೇಪರ್ ಕವರ್, ಹಳೆ ದಿನಪತ್ರಿಕೆ, ಬಟ್ಟೆ ಬ್ಯಾಗ್‌ಗಳನ್ನು ಬಳಸಬೇಕು. ಪ್ರತಿ ಅಂಗಡಿ ಮುಂದೆ ಡಸ್ಟ್ಬಿನ್ ಇಟ್ಟು, ಚಾಕಲೇಟ್ ಪೇಪರ್, ಗುಟ್ಕ ಪ್ಯಾಕೇಟ್, ಬಾಳೆಹಣ್ಣು ಸಿಪ್ಪೆ ಇತ್ಯಾದಿಗಳನ್ನು ಉಪಯೋಗಿಸಿ ಬಿಸಾಡುವಂತಹ ವಸ್ತುಗಳನ್ನು ಡಸ್ಟ್ಬಿನ್ ಗೆ ಹಾಕಲು ಪ್ರತೀ ಗ್ರಾಹಕರಿಗೆ ಸೂಚಿಸಬೇಕು. ಗೂಡಂಗಡಿಗಳಲ್ಲಿ ವಸ್ತುಗಳನ್ನು ಬಿಡಿಬಿಡಿಯಾಗಿ ಮಾರಾಟ ಮಾಡುವುದನ್ನು ಸರಕಾರ ನಿಷೇಧಿಸಿರುತ್ತದೆ. ಆದ್ದರಿಂದ ಈ ಎಲ್ಲಾ ಸೂಚನೆಗಳನ್ನು ಪ್ರತಿ ಅಂಗಡಿ, ಗೂಡಂಗಡಿ, ತಳ್ಳುಗಾಡಿಯವರೂ ತಪ್ಪದೇ ಪಾಲಿಸಿ, ಸಾರ್ವಜನಿಕ ಆರೋಗ್ಯ ಕಾಪಾಡಲು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!