Saturday, September 21, 2024
Saturday, September 21, 2024

ಮಕ್ಕಳ ಸೃಜನಾತ್ಮಕ ಚಿಂತನೆಗೆ ಧ್ವನಿಯಾಗಬೇಕು: ರಮೇಶ್ ಪೂಜಾರಿ

ಮಕ್ಕಳ ಸೃಜನಾತ್ಮಕ ಚಿಂತನೆಗೆ ಧ್ವನಿಯಾಗಬೇಕು: ರಮೇಶ್ ಪೂಜಾರಿ

Date:

ಕೋಟ, ನ.20: ಮಕ್ಕಳಲ್ಲೂ ವಿಶೇಷವಾದ ಪ್ರತಿಭೆಗಳು ಅಡಕವಾಗಿರುತ್ತದೆ, ಅಂತಹ ಪ್ರತಿಭೆಗಳು ಅನಾವರಣಗೊಂಡು ಮುಖ್ಯವಾಹಿನಿಗೆ ಬರುವಂತೆ ಮಾಡುವ ಕೆಲಸ ನಮ್ಮೆಲ್ಲರ ಜವಬ್ದಾರಿಯಾಗಿರುತ್ತದೆ, ಅವರಲ್ಲಿನ ಹೊಸ ಚಿಂತನೆ, ಅಭಿರುಚಿಗಳಿಗೆ ಧ್ವನಿಯಾಗುವುದರ ಮೂಲಕ ಅವರ ಸಾಧನೆಯ ಹೆಜ್ಜೆಗಳಿಗೆ ವೇದಿಕೆ ಕಲ್ಪಿಸಬೇಕು ಎಂದು ಯಡ್ತಾಡಿ ಯುವವಾಹಿನಿ ಘಟಕದ ಅಧ್ಯಕ್ಷ ರಮೇಶ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ)ಯಡ್ತಾಡಿ ಘಟಕದ ವತಿಯಿಂದ ಸಾಯ್ಬ್ರಕಟ್ಟೆಯ ದಾಳಾಡಿ ಮನೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನ್ನಡ ಶಾಲೆಯ ಮಹತ್ವ ಸಾರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದಿ ಪಡೆದಿರುವ ವಿಡಿಯೋದಲ್ಲಿ ಅಭಿನಯಿಸಿದ ಪ್ರಣೀತಾ, ಪುನೀತ್ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸೃಜನ್ , ಸಾಗರ್ ಅವರನ್ನು ಸನ್ಮಾನಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿ ರಾಘವೇಂದ್ರ ಪೂಜಾರಿ ಬೈಕಾಡಿ, ರಾಜು ಪೂಜಾರಿ ಯಡ್ತಾಡಿ, ನರಸಿಂಹ ಪೂಜಾರಿ, ಯಡ್ತಾಡಿ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಅಮೃತ್ ಎಸ್., ಹಾಗೂ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಜಿತ್ ಕುಮಾರ್ ವರದಿ ವಾಚಿಸಿದರು. ಪ್ರತಿಮಾ ರಮೇಶ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!