Thursday, September 19, 2024
Thursday, September 19, 2024

ಕೆ.ಎಂ.ಸಿ ಮಣಿಪಾಲ: ‘ವೆಲ್ ವುಮೆನ್’ ಕಾರ್ಯಕ್ರಮಕ್ಕೆ ಚಾಲನೆ

ಕೆ.ಎಂ.ಸಿ ಮಣಿಪಾಲ: ‘ವೆಲ್ ವುಮೆನ್’ ಕಾರ್ಯಕ್ರಮಕ್ಕೆ ಚಾಲನೆ

Date:

ಮಣಿಪಾಲ, ನ.21: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಮುದಾಯದ ಮಹಿಳೆಯರಿಗಾಗಿ ‘ವೆಲ್ ವುಮೆನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದರ ಮುಖಾಂತರ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಹಾಗೂ ಜಾಗೃತಿ ಮಾಹಿತಿ ಕಾರ್ಯಕ್ರಮ. ಇದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲ ಹಾಗೂ ಮಣಿಪಾಲ್ ಫೌಂಡೇಶನ್ ಇದರ ಜಂಟಿ ಉಪಕ್ರಮವಾಗಿದೆ. ಇದರ ಅಂಗವಾಗಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತವಾಗಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಜೊತೆಗೆ ಸಮಗ್ರ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ ಹಾಗೂ ಸಮುದಾಯ ವೈದ್ಯಕೀಯ ವಿಭಾಗ- ಮತ್ತು ಸಮುದಾಯ ಆಂಕೊಲಾಜಿ ಕೇಂದ್ರ ಸಹಯೋಗದಲ್ಲಿ ನಡೆಸಲಾಗುತ್ತದೆ.

ಮಣಿಪಾಲ್ ಫೌಂಡೇಶನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿನಾರಾಯಣ ಶರ್ಮಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಮಹಿಳೆಯರ ಆರೋಗ್ಯ ವೃದ್ಧಿಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಮಣಿಪಾಲ್ ಫೌಂಡೇಶನ್ ಸಾಧ್ಯವಾದಷ್ಟು ಮಹಿಳೆಯರನ್ನು ತಪಾಸಣೆ ಮಾಡಲು ಈ ಉಪಕ್ರಮವನ್ನು ತೆಗೆದುಕೊಂಡಿದೆ. ಮಣಿಪಾಲ್ ಫೌಂಡೇಶನ್ ಈ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ಗಳನ್ನು ಪರೀಕ್ಷಿಸಲು ಈ ಉಪಕ್ರಮವನ್ನು ಕೈಗೊಂಡಿದೆ, ಇದು ಭಾರತದಲ್ಲಿ ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ. ಈ ಕ್ಯಾನ್ಸರ್/ಪ್ರೀಕ್ಯಾನ್ಸರ್‌ಗಳ ಆರಂಭಿಕ ಪತ್ತೆಯು ಉತ್ತಮ ಚಿಕಿತ್ಸೆ ಮತ್ತು ಗುಣಪಡಿಸುವ ದರವನ್ನು ಹೊಂದಿರುತ್ತದೆ. ಏಕೆಂದರೆ ಆರಂಭಿಕ ಪತ್ತೆ ಯಾವಾಗಲೂ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ ಮತ್ತು ಇದರಿಂದ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ತಪಾಸಣೆ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಪ್ರೌಢಶಾಲಾ ಮತ್ತು ಕಾಲೇಜು ಬಾಲಕಿಯರಿಗೆ ಜಿಲ್ಲಾಮಟ್ಟದ ಪಿಸಿಓಎಸ್ ತಪಾಸಣೆ ಮತ್ತು ಜಾಗೃತಿ ಅಭಿಯಾನವನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದರು. ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ ಅವರು ಸ್ತನ ಕ್ಯಾನ್ಸರ್ ಕುರಿತಾದ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಿದರು. ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಯ ಸಿಒಒ ಡಾ.ಆನಂದ್ ವೇಣುಗೋಪಾಲ್ ಗರ್ಭಕಂಠದ ಕ್ಯಾನ್ಸರ್ ಕುರಿತಾದ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಿದರು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಪಾದ್ ಹೆಬ್ಬಾರ್ ಮತ್ತು ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನಿಕುಮಾರ್ ಉಪಸ್ಥಿತರಿದ್ದರು.

ಕೆಎಂಸಿ ಮಣಿಪಾಲದ ಅಸೋಸಿಯೇಟ್ ಡೀನ್ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಂಯೋಜಕರಾದ ಡಾ. ನವೀನ್ ಎಸ್ ಸಾಲಿನ್ಸ್ ಅವರು ವೆಲ್ ವುಮೆನ್ ಕಾರ್ಯಕ್ರಮದ ಕುರಿತು ಅವಲೋಕನ ನೀಡಿದರು. ಸಭೆಯನ್ನು ಸ್ವಾಗತಿಸಿದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಶ್ಯಾಮಲಾ ಜಿ, ಈ ಮಹತ್ವದ ಆರೋಗ್ಯ ಉಪಕ್ರಮಕ್ಕೆ ಚಾಲನೆ ನೀಡುವ ಸಹಕಾರಿ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕರು ಮತ್ತು ಸಂಯೋಜಕರು, ಸೆಂಟರ್ ಫಾರ್ ಕಮ್ಯುನಿಟಿ ಆಂಕೊಲಾಜಿ ಡಾ. ರಂಜಿತಾ ಎಸ್ ಶೆಟ್ಟಿ ಅವರು ವಂದನಾರ್ಪಣೆ ಮಾಡಿ, ಸಮುದಾಯದಲ್ಲಿ ಮಹಿಳೆಯರ ಆರೋಗ್ಯವನ್ನು ಉತ್ತೇಜಿಸುವ ಸಾಮೂಹಿಕ ಸಮರ್ಪಣೆಯನ್ನು ಶ್ಲಾಘಿಸಿದರು.

ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗತಿಕವಾಗಿ ಮಹಿಳೆಯರಲ್ಲಿ ಕಂಡುಬರುವ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್. ವೆಲ್ ವುಮೆನ್ ಕಾರ್ಯಕ್ರಮವು ರಕ್ತಹೀನತೆಗೆ ಎಚ್ ಬಿ ಪರೀಕ್ಷೆ, ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ನೋವು ರಹಿತ ಸ್ತನ ಸ್ಕ್ರೀನಿಂಗ್ ಮತ್ತು ನೋವು ರಹಿತ ಸಾಧನಗಳ ಮೂಲಕ ಗರ್ಭಕಂಠದ ಸ್ಕ್ರೀನಿಂಗ್ ಸೇವೆಗಳ ಶ್ರೇಣಿಯನ್ನು ಒಳಗೊಂಡಿದೆ. ಹ್ಯಾಂಡ್ಹೆಲ್ಡ್ ಸಾಧನಗಳ ಮೂಲಕ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಸ್ಕ್ರೀನಿಂಗ್ ತಕ್ಷಣವೇ ಫಲಿತಾಂಶಗಳನ್ನು ನೀಡುತ್ತದೆ. ಈ ಸಮಗ್ರ ಆರೋಗ್ಯ ತಪಾಸಣೆಯ ಚಟುವಟಿಕೆಯು ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಲ್ಲಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ನ ಆರಂಭಿಕ ಪತ್ತೆ ಮತ್ತು ತಡೆಗಟ್ಟುವಿಕೆಯ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ಸಂಘಟಕರು ನಿರೀಕ್ಷಿಸುತ್ತಾರೆ.

‘ವೆಲ್ ವುಮೆನ್ ಕ್ಲಿನಿಕ್’ ಉಪಕ್ರಮದ ಭಾಗವಾಗಿ ಮಣಿಪಾಲ ಫೌಂಡೇಶನ್ ಸಹಯೋಗದೊಂದಿಗೆ, ಸಮುದಾಯದ ಹಿಂದುಳಿದ ವರ್ಗಗಳ 30-55 ವರ್ಷ ವಯಸ್ಸಿನ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮಾಡಲಾಗುವುದು. ಧನಾತ್ಮಕ ಫಲಿತಾಂಶ ಹೊಂದಿರುವ ಮಹಿಳೆಯರನ್ನು ಸಮಗ್ರ ಕ್ಯಾನ್ಸರ್ ಆರೈಕೆ ಸೌಲಭ್ಯವಿರುವ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೆಚ್ಚ್ಜಿನ ತಪಾಸಣೆಗೆ ಈ ಕಾರ್ಯಕ್ರಮದ ಭಾಗವಾಗಿ ಉಲ್ಲೇಖಿಸಲಾಗುತ್ತದೆ. ಈ ಸೇವೆಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಡಾ. ಟಿಎಂಎ ಪೈ ಆಸ್ಪತ್ರೆ, ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳ ಮತ್ತು ಉಡುಪಿ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0820 2923748 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!