Home ಸುದ್ಧಿಗಳು ಪ್ರಾದೇಶಿಕ ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ- ಭಜನಾ ಸಪ್ತಾಹಕ್ಕೆ ಚಾಲನೆ

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ- ಭಜನಾ ಸಪ್ತಾಹಕ್ಕೆ ಚಾಲನೆ

642
0

ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಭಜನಾ ಮಂದಿರದ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್, ಭಾಸ್ಕರ ಕೋಟ್ಯಾನ್, ವಿನೋದ್ ಪೂಜಾರಿ, ಪ್ರಮುಖರಾದ ಕುಶಲ್ ಕುಮಾರ್, ಸುಧಾಕರ ಪೂಜಾರಿ, ವಿಘ್ನೇಶ್, ಪ್ರಭಾ ದಯಾನಂದ್, ವಿಜಯಲಕ್ಷ್ಮಿ, ರಾಜು ಪೂಜಾರಿ, ಅರ್ಚಕರಾದ ಜೀವನ್, ಅದಿತ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಬೆಳಿಗ್ಗೆ ಗಂಟೆ 8.00ರಿಂದ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12.00ಕ್ಕೆ 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಚಾಲನೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ಜರಗಲಿದೆ. ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ, ನಗರ ಭಜನೆ, ಕುಣಿತ ಭಜನೆಯೊಂದಿಗೆ ರಾತ್ರಿ ಗಂಟೆ 12.00ಕ್ಕೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.