Friday, September 20, 2024
Friday, September 20, 2024

ಕಲ್ಯಾಣಪುರ: ಗೋಕರ್ಣ ಪರ್ತಗಾಳಿ ಮಠಾಧೀಶರ ಭೇಟಿ

ಕಲ್ಯಾಣಪುರ: ಗೋಕರ್ಣ ಪರ್ತಗಾಳಿ ಮಠಾಧೀಶರ ಭೇಟಿ

Date:

ಕಲ್ಯಾಣಪುರ, ಡಿ.8: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ್ ಸ್ವಾಮೀಜಿಯವರು ಪ್ರಥಮ ಬಾರಿಗೆ ಭೇಟಿ ನೀಡಿದರು. ಸ್ವಾಮೀಜಿಯವರನ್ನು ಪೂರ್ಣಕುಂಭ, ಮಂಗಳ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು. ದೇವಳದ ವತಿಯಿಂದ ಶ್ರೀಪಾದರ ಪಾದಪೂಜೆ, ಗೌರವಾರ್ಪಣೆ, ಗುರುಕಾಣಿಕೆ ಸಮರ್ಪಿಸಲಾಯಿತು. ಬಳಿಕ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ಭಕ್ತರು ದೇವರ ಬಳಿ ಸಮಸ್ಯೆಗಳನ್ನು ಹೇಳುವ ಬದಲು ದೇವರ ಬಗ್ಗೆ ಚಿಂತಿಸಿ ನಾನಾ ವಿಧದ ಸೇವೆಗಳನ್ನು ಮಾಡಬೇಕು ಎಂದರು.

ದೇವಳದ ಜೀರ್ಣೋದ್ಧಾರದಿಂದ ಊರು, ರಾಜ್ಯ, ರಾಷ್ಟ್ರ ಉದ್ದಾರವಾಗುತ್ತದೆ. ದೇವಳದ ವತಿಯಿಂದ ಹಮ್ಮಿಕೊಂಡ ಜೀರ್ಣೋದ್ಧಾರ ಕಾರ್ಯ ಶೀಘ್ರ ನೆರವೇರಲಿ. ಶ್ರೀ ವೆಂಕಟರಮಣ ದೇವರ ಅನುಗ್ರಹದಿಂದ ಭಕ್ತರ ಕಲ್ಯಾಣವಾಗಲಿವೆಂದು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಸಿದರು. ದೇವಳದ ಆಡಳಿತ ಮೊಕ್ತೇಸರ ಅನಂತಪದ್ಮನಾಭ ಕಿಣಿ, ದೇವಳದ ಪ್ರಧಾನ ಅರ್ಚಕ ಜಯದೇವ ಭಟ್, ಗಣಪತಿ ಭಟ್, ಅರವಿಂದ ಬಾಳಿಗಾ, ದತ್ತಾತ್ರೇಯ ಕಿಣಿ, ವಿನೋದ್ ಕಾಮತ್, ಲಕ್ಷ್ಮೀನಾರಾಯಣ ನಾಯಕ್, ವಿದ್ಯಾಧರ ಕಿಣಿ, ಸುದೇಶ್ ಭಟ್, ಅಮ್ಮುಂಜೆ ಯಶವಂತ ನಾಯಕ್, ಶಿವಾನಂದ ಕಿಣಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಜಿ.ಎಸ್.ಬಿ ಸಭಾ ಸದಸ್ಯರು, ಮಹಿಳಾ ಮಂಡಳಿ ಸದಸ್ಯರು ಹಾಗೂ ಜಿ.ಎಸ್.ಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!