Thursday, September 19, 2024
Thursday, September 19, 2024

ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ: ಸಾಧಕರಿಗೆ ಅಭಿನಂದನೆ

ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ: ಸಾಧಕರಿಗೆ ಅಭಿನಂದನೆ

Date:

ಕೆಮ್ಮಣ್ಣು, ಡಿ.9: ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ನ ನೂತನ ವಾಣಿಜ್ಯ ಸಂಕೀರ್ಣ ‘ಸಹಕಾರ ಸಿಂಧು’ ಹಾಗೂ ಹಂಪನಕಟ್ಟೆ-ಕೆಮ್ಮಣ್ಣಿನಲ್ಲಿ 10ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಸ್ಥಳೀಯ ಮಹನಿಯರನ್ನು ಗುರುತಿಸಿ ಗೌರವಿಸಿ, ಅಭಿನಂದಿಸಲಾಯಿತು. ಬಡ ರೋಗಿಗಳ ಪಾಲಿಗೆ ಹರಿಯೇ ಆದ ಇಪ್ಪತ್ತು ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ವೈದ್ಯ ಅಶ್ವಿನಿ ಕುಮಾರ್, ಸರ್ಪ ಸುತ್ತು ಕಾಯಿಲೆಗೆ ಔಷಧಿಯನ್ನು ನೀಡುತ್ತಾ ಸಾವಿರಾರು ಮಂದಿಯನ್ನು ಗುಣ ಪಡಿಸಿದ ಮಾಹಾ ತಾಯಿ ವನಜಾ ಆಚಾರ್ಯ, ಸಾಹಸ ಪ್ರವೃತ್ತಿಯಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವ ಈಶ್ವರ ಮಲ್ಪೆ, ಕುಡಿಯುವ ನೀರಿನ ಸಮಸ್ಯೆಯನ್ನು ಮನಗೊಂಡು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿ ಅಂತರ್ಜಲ ಮತ್ತು ನೀರಾವರಿಯ ಬಗ್ಗೆ ಅರಿವು ಮೂಡಿಸಿ ಆ ಕ್ಷೇತ್ರದಲ್ಲಿ ಸೇವೆಗೈದ ಜೋಸೆಫ್ ಜಿ. ಎಂ. ರೆಬೆಲ್ಲೋ, ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ತಮನ್ನು ತಾವು ತೊಡಗಿಸಿಕೊಂಡು ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರವೀಣ್ ಗಾಣಿಗ ಕೆಮ್ಮಣ್ಣು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ)ದಲ್ಲಿ 15 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ, ಇದೀಗ ರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿರುವ ಚಿತ್ರರವರನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಸಂತ ತೆರೇಜಾ ಚರ್ಚ್ನ ಧರ್ಮಗುರುಗಳಾದ ಅತೀವಂದನೀಯ ರೆ.ಫಾ. ಫಿಲಿಪ್ ನೇರಿ ಆರಾನ್ಹ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಕಾಂಚನ ಹೂಂಡೈನ ಎಂ. ಡಿ. ಪ್ರಸಾದ್‌ರಾಜ್ ಕಾಂಚನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರೂ, ಕ.ರಾ.ಸ. ಮಹಾ ಮಂಡಳ ಬೆಂಗಳೂರಿನ ನಿರ್ದೇಶಕರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ದ.ಕ.ಜಿ.ಕೇ.ಸ. ಬ್ಯಾಂಕ್ ನಿ., ಮಂಗಳೂರು ಹಾಗೂ ಕ.ರಾ.ಸ.ಮಾ.ಮಹಾ ಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಡಾ. ಐ. ದೇವಿಪ್ರಸಾದ್ ಶೆಟ್ಟಿ, ಬಡಾನಿಯೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಯಶೋದ ಆಚಾರ್ಯ, ಉಡುಪಿ ಮತ್ತು ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್., ಗಣಪತಿ ವ್ಯವಸಾಯ ಸೇ.ಸ. ಸಂಘ ನಿ., ಕೆಮ್ಮಣ್ಣಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಶ್ರೀ ದು.ಪ.ಅಮ್ಮನವರ ದೇವಸ್ಥಾನ ಸನ್ಯಾಸಿಮಠ ಬಡಾನಿಡಿಯೂರಿನ ಅಧ್ಯಕ್ಷರಾದ ಉಮೇಶ್ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಟಿ. ಎನ್. ರಹಮತುಲ್ಲಾ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ., ಬಡಾನಿಡಿಯೂರು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲತಿ, ಸಂಸ್ಥೆಯ ಅಧ್ಯಕ್ಷರಾದ ಅರುಣ ಕುಮಾರ್ ಶೆಟ್ಟಿ, ಪ್ರಧಾನ ವ್ಯವಸ್ಥಾಪಕ ರಾಜೇಶ್ ಹೆಗ್ಡೆ, ಶಾಖಾ ವ್ಯವಸ್ಥಾಪಕರಾದ ಸಂದೀಪ ಕೆ. ಶೆಟ್ಟಿ, ಸಂಸ್ಥೆಯ ನಿರ್ದೇಶಕರು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!