Saturday, October 19, 2024
Saturday, October 19, 2024

ತ್ವಕ್‌ಶುದ್ಧಿ 2023- ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ತ್ವಕ್‌ಶುದ್ಧಿ 2023- ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Date:

ಉಡುಪಿ, ಡಿ.10: ಮಣಿಪಾಲದ ಮುನಿಯಾಲು ಆಯುರ್ವೇದ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ‘ತ್ವಕ್‌ಶುದ್ಧಿ-2023’ ಕಾಲೇಜಿನ ಬುದ್ಧಾಯುರ್ವೇದ ಆಡಿಟೋರಿಯಂನಲ್ಲಿ ನಡೆಯಿತು. ಚರ್ಮದ ಖಾಯಿಲೆಗಳು ಮತ್ತು ಸೌಂದರ್ಯ ಚಿಕಿತ್ಸೆಗಳ ಬಗ್ಗೆ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ ನಡೆಯಿತು. ಮಣಿಪಾಲ ಕೆ.ಎಂ.ಸಿಯ ಚರ್ಮರೋಗ ವಿಭಾಗದ ಮುಖ್ಯಸ್ಥರಾದ ಡಾ.ರಾಘವೇಂದ್ರ ರಾವ್, ಕಾಸರಗೋಡಿನ ಇನ್‌ಸ್ಟಿಟ್ಯೂಟ್ ಆಫ್ ಎಪ್ಲಾಯಡ್ ಡರ್ಮಟಾಲಜಿ ವಿಭಾಗದ ಮುಖ್ಯ ಸಲಹೆಗಾರರಾದ ಡಾ.ಗುರುಪ್ರಸಾದ್ ಅಗ್ಗಿತ್ತಾಯ, ಕೊಟ್ಟಕ್ಕಲ್‌ನ ವಿಪಿಎಸ್‌ವಿ ಆಯುರ್ವೇದ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ.ಗೋಪಿಕೃಷ್ಣ ಎಸ್, ಮುನಿಯಾಲ್ ಗ್ರೂಫ್ ಅಫ್ ಕಾಲೇಜಿನ ನಿರ್ದೇಶಕರಾದ ಡಾ.ಶ್ರದ್ಧಾ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಸತ್ಯನಾರಾಯಣ ಬಿ, ಕೋರ್ ಕಮಿಟಿ ಸದಸ್ಯರಾದ ಡಾ.ನಿವೇದಿತಾ ಹೆಬ್ಬಾರ್ ಉದ್ಘಾಟನೆ ನೆರವೇರಿಸಿದರು.

ಡಾ.ನಿವೇದಿತಾ ಹೆಬ್ಬಾರ್ ಸ್ವಾಗತಿಸಿ, ಡಾ.ಸತ್ಯನಾರಾಯಣ ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ.ಅರ್ಚನಾ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು. ನಂತರ ನಡೆದ ವೈಜ್ಞಾನಿಕ ಗೋಷ್ಠಿಯಲ್ಲಿ ತಜ್ಞ ವೈದ್ಯರಾದ ಡಾ.ರಾಘವೇಂದ್ರ ರಾವ್, ಡಾ.ಗುರುಪ್ರಸಾದ್ ಅಗ್ಗಿತ್ತಾಯ, ಡಾ.ಗೋಪಿಕೃಷ್ಣ ಎಸ್ ಚರ್ಮರೋಗಗಳ ಬಗ್ಗೆ ವಿಚಾರ ಮಂಡಿಸಿದರು. ಕಿನ್ನಿಗೋಳಿ ಆಯುರ್ ರಶ್ಮಿ ಕ್ಲಿನಿಕ್‌ನ ಮುಖ್ಯ ಸಲಹೆಗಾರರಾದ ಡಾ. ರಶ್ಮಿ ಸುವರ್ಣ ಸೋಪ್ ತಯಾರಿಕೆ, ಟ್ರೈಕಾಲಜಿ ಉಪಕರಣಗಳ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮುನಿಯಾಲು ಆಯುರ್ವೇದ ಕಾಲೇಜಿನ ರಸಶಾಸ್ತ್ರ ಮತ್ತು ಭೈಷಜ್ಯಕಲ್ಪನಾ ವಿಭಾಗದ ಉಪನ್ಯಾಸಕರಾದ ಡಾ.ವತ್ಸಲಾ ನಾಯಕ್ ಮತ್ತು ಸಂಶೋಧನಾ ವಿಭಾಗದ ಡಾ.ಅಕ್ಷತಾ, ಅಶ್ವಿತಾ ಸೌಂದರ್ಯವರ್ಧಕಗಳ ಬಗ್ಗೆ
ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ದೇಶದಾದ್ಯಂತದ 27 ಆಯುರ್ವೇದ ಕಾಲೇಜಿನ 230 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ, 140 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧ ಮಂಡಿಸಿದರು. ಸಮಾರೋಪ ಸಮಾರಂಭದಲ್ಲಿ ಅತ್ಯುತ್ತಮ ಪ್ರಬಂಧ ಮಂಡನೆ ಮತ್ತು ಭಿತ್ತಿ ಪತ್ರ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ರಸಶಾಸ್ತ್ರ ಮತ್ತು ಭೈಷಜ್ಯಕಲ್ಪನಾ ವಿಭಾಗದ ಪ್ರಾಧ್ಯಾಪಕರಾದ ಡಾ.ಜೆ ದಿನೇಶ್ ನಾಯಕ್ ಇಂಗ್ಲೀಷ್‌ನಲ್ಲಿ ಬರೆದ ‘ರಸಾರ್ಣವ’ ಪುಸ್ತಕ ಬಿಡುಗಡೆ ಮಾಡಲಾಯಿತು.

ಡಾ.ಮಾಧವಿ ಕಾರ್ಯಕ್ರಮವನ್ನು ನಿರ್ವಹಿಸಿ, ಡಾ.ರವಿಶಂಕರ್ ಶೆಣೈ ವಂದನಾರ್ಪಣೆಗೈದರು. ಸಂಸ್ಥೆಯ ನಿರ್ದೇಶಕರಾದ ಹೇಮಲತಾ ಶೆಟ್ಟಿ, ಶ್ಲೋಕ ಶೆಟ್ಟಿ, ಕೋರ್ ಕಮಿಟಿ ಸದಸ್ಯರಾದ ಡಾ. ಸಹನಾ ಶೆಟ್ಟಿ, ಡಾ.ರಾಜ್ ಕಿರಣ ಮತ್ತು ಕಾಲೇಜಿನ ಬೋಧಕ ಬೋಧಕೇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!