Wednesday, February 26, 2025
Wednesday, February 26, 2025

ಮಣಿಪಾಲ: ಆತ್ಮಹತ್ಯೆ ತಡೆ ಕಾರ್ಯಗಾರ

ಮಣಿಪಾಲ: ಆತ್ಮಹತ್ಯೆ ತಡೆ ಕಾರ್ಯಗಾರ

Date:

ಮಣಿಪಾಲ, ಡಿ.12: ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದದಲ್ಲಿ ವಿಭಾಗ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಹಾಗೂ ಡಾ. ಚೈತ್ರ ಆರ್. ರಾವ್ ಅವರ ಮಾರ್ಗದರ್ಶನದಲ್ಲಿ ‘ಆತ್ಮಹತ್ಯೆಯನ್ನು ತಡೆಗಟ್ಟುವ ಕ್ರಮಗಳು ಹಾಗೂ ಇದರಲ್ಲಿ ಸಮುದಾಯದ ಮಧ್ಯಸ್ಥಗಾರರ ಪಾತ್ರ’ ಎನ್ನುವ ವಿಷಯದ ಕುರಿತು ಕಾರ್ಯಗಾರ ನಡೆಯಿತು. ಕೆ.ಎಂ.ಸಿ. ಮಣಿಪಾಲದ ಮನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ರಾಜೇಶ್ ಕೃಷ್ಣ ಭಂಡಾರಿ ಹಾಗೂ ಪ್ರವೀಣ್ ಪಿ. ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾರ್ಗದರ್ಶನ ನೀಡಿದರು.

ಉಡುಪಿ ನಗರಸಭೆಯ ಸದಸ್ಯರು, ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ಸಮಾಜ ಸೇವಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿದಂತೆ ಸುಮಾರು 90 ಮಂದಿ ಭಾಗವಹಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಕಿರು ನಾಟಕ ಪ್ರದರ್ಶಿಸಲಾಯಿತು. ಸಾಮಾಜಿಕ ಕಾರ್ಯಕರ್ತೆ ನೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಸಾಮಾಜಿಕ ಕಾರ್ಯಕರ್ತ ಮಹೇಶ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ನವೀನ ಕಾರ್ಯಕ್ರಮ ನಿರ್ವಹಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!