Saturday, January 17, 2026
Saturday, January 17, 2026

ಸಮವಸ್ತ್ರ ನಿಯಮ ಪಾಲನೆಗೆ ಸರ್ಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ಪಾಲ್ ಸುವರ್ಣ

ಸಮವಸ್ತ್ರ ನಿಯಮ ಪಾಲನೆಗೆ ಸರ್ಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ಪಾಲ್ ಸುವರ್ಣ

Date:

ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ರಾಜ್ಯ ಸರಕಾರದ ಆದೇಶ ಶಿಕ್ಷಣ ವ್ಯವಸ್ಥೆಯಲ್ಲಿ ಹಿಜಾಬ್ ವಿವಾದದ ವಿಚಾರದಲ್ಲಿ ಹೋರಾಟಕ್ಕೆ ಸಂದ ಪ್ರಥಮ ಗೆಲುವು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ರಾಜ್ಯದಾದ್ಯಂತ ಶಾಲಾ ಕಾಲೇಜಿನಲ್ಲಿ ಹಿಜಾಬ್ ವಿಚಾರದ ಮೂಲಕ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಮನವಿಗೆ ಶೀಘ್ರವಾಗಿ ಸ್ಪಂದಿಸಿ ಆದೇಶ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ರವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸತಕ್ಕದ್ದು ಎಂಬ ಆದೇಶ ನೀಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯ ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸುವುದು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೆ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವಂತೆ ಆದೇಶಿಸುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆತರಲು ಯತ್ನಿಸುತ್ತಿದ್ದ ಮತೀಯವಾದಿ ರಾಷ್ಟ್ರ ವಿರೋಧಿ ಸಂಘಟನೆಗೆ ತಕ್ಕ ಉತ್ತರ ನೀಡಿದೆ. ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲೂ ನಮ್ಮ ಹೋರಾಟಕ್ಕೆ ಗೆಲುವು ಸಿಗುವ ವಿಶ್ವಾಸವಿದೆ ಎಂದು ಯಶ್ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!