Wednesday, July 29, 2026
Wednesday, July 29, 2026

ಬಾರ್ಕೂರು: ‘ಸಂವಹನ ಕೌಶಲ್ಯಗಳು’ ಕಾರ್ಯಗಾರ

ಬಾರ್ಕೂರು: ‘ಸಂವಹನ ಕೌಶಲ್ಯಗಳು’ ಕಾರ್ಯಗಾರ

Date:

ಬಾರ್ಕೂರು, ಡಿ.15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇಂಗ್ಲಿಷ್ ವಿಭಾಗದ ವತಿಯಿಂದ ‘ಸಂವಹನ ಕೌಶಲ್ಯಗಳು’ ಕಾರ್ಯಗಾರ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಇಲ್ಲಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶ್ವಿನ್ ಲಾಯಲ್ ಮೆಂಡೋನ್ಸಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂವಹನ ಕೌಶಲವನ್ನು ವೃದ್ಧಿಸಿಕೊಳ್ಳಲು ಅಗತ್ಯವಾದ ಮಾರ್ಗೋಪಾಯಗಳ ಕುರಿತು ಮಾಹಿತಿ ನೀಡಿದರು. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಭಾಷಾ ಕಲಿಕೆಯನ್ನು ಆಸಕ್ತಿದಾಯಕವಾಗಿಸಲು ಸಾಧ್ಯ ಎಂದು ಪ್ರಾತ್ಯಕ್ಷಿಕೆ ಮತ್ತು ವೀಡಿಯೋಗಳ ಮೂಲಕ ಪ್ರಸ್ತುತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಹಾಗೂ ಐಕ್ಯೂಏಸಿ ಸಂಚಾಲಕರಾದ ವಿದ್ಯಾ ಪಿ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ನಿರಂಜನ ಶರ್ಮಾ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!