Friday, October 18, 2024
Friday, October 18, 2024

ಪುತ್ತಿಗೆ ಪರ್ಯಾಯ: ರಾಮಕ್ಷತ್ರೀಯ ಸಮಾಜದೊಂದಿಗೆ ಸಮಾಲೋಚನಾ ಸಭೆ

ಪುತ್ತಿಗೆ ಪರ್ಯಾಯ: ರಾಮಕ್ಷತ್ರೀಯ ಸಮಾಜದೊಂದಿಗೆ ಸಮಾಲೋಚನಾ ಸಭೆ

Date:

ಉಡುಪಿ, ಡಿ.17: ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಪ್ರಯುಕ್ತ, ಸ್ವಾಗತ ಸಮಿತಿಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ರಾಮಕ್ಷತ್ರೀಯ ಸಮಾಜದೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ರಾಮಕ್ಷತ್ರೀಯ ಸಮಾಜ ಪುತ್ತಿಗೆ ಪರ್ಯಾಯದ ಪ್ರತಿ ಉಪಸಮಿತಿಯಲ್ಲಿ ಸಹಕರಿಸಬೇಕಾಗಿ ವಿನಂತಿಸಿ, ಸಮಾಜದ ಅಧಿಕೃತ ಸದಸ್ಯತ್ವವನ್ನು ಪತ್ರ ಮುಖೇನ ನೀಡಿದರು.

ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಚ್.ಎಸ್. ಬಲ್ಲಾಳ್, ಕಾರ್ಯಾಧ್ಯಕ್ಷರಾದ ಕೆ. ರಘುಪತಿ ಭಟ್, ಮಹಾಪೋಷಕರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಸಂಚಾಲಕರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಯಕರ ಶೆಟ್ಟಿ ಇಂದ್ರಾಳಿ, ದಿವಾಕರ್ ಶೆಟ್ಟಿ, ಸಂತೋಷ್ ಶೆಟ್ಟಿ ತೆಂಕರಗುತ್ತು ಉಪಸ್ಥಿತರಿದ್ದರು. ಪತ್ರ ಸ್ವೀಕರಿಸಿದ ಸಮಾಜದ ರವಿ ರಾವ್, ಡಾ. ಶಿವಾನಂದ್ ನಾಯಕ್, ಜಯಕರ ಕೆ. ಕೆ.ಟಿ. ನಾಯಕ್, ಪ್ರವೀಣ್ ಕುಮಾರ್ ಗುರ್ಮೆ, ಬಾಲಗಂಗಾಧರ ತಮ್ಮ ಸಮಾಜವು ಎಲ್ಲಾ ವಿಭಾಗಗಳಲ್ಲೂ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ, ಸಮಾಜದ ಪ್ರತಿನಿಧಿಯಾಗಿ ಕಿಶೋರ್ ಕುಮಾರ್ ಗುರ್ಮೆ
ಯವರನ್ನು ನೇಮಿಸಲಾಯಿತು. ಸುಮಾರು 100ಕ್ಕು ಅಧಿಕ ಸಂಖ್ಯೆಯಲ್ಲಿ ರಾಮಕ್ಷತ್ರೀಯ ಸಮಾಜದ ಮಹಿಳೆಯರೂ ಸೇರಿ ಗಣ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಸಮಿತಿಯ ಸಂಚಾಲಕ ರಮೇಶ್ ಭಟ್ ಕೆ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!