Saturday, October 19, 2024
Saturday, October 19, 2024

ಬಾರ್ಕೂರು: ಸಿರಿಧಾನ್ಯಗಳ ಅಂತರಾಷ್ಟ್ರೀಯ ವರ್ಷಾಚರಣೆ

ಬಾರ್ಕೂರು: ಸಿರಿಧಾನ್ಯಗಳ ಅಂತರಾಷ್ಟ್ರೀಯ ವರ್ಷಾಚರಣೆ

Date:

ಬಾರ್ಕೂರು, ಡಿ.19: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಧಾನ್ಯಗಳ ಅಂತರಾಷ್ಟ್ರೀಯ ವರ್ಷವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸಿರಿ ಧಾನ್ಯಗಳಿಂದ ತಯಾರಿಸಿದ ಸಿಹಿ ತಿನಿಸನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶೈಕ್ಷಣಿಕ ಸಮಿತಿಯ ಮುಖ್ಯ ಸಲಹೆಗಾರರಾದ ಶೋಭಾ ಆರ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳ ಬಳಕೆಯ ಅಗತ್ಯವನ್ನು ಸವಿವರವಾಗಿ ವಿವರಿಸಿದರು. ಎನ್.ಸಿ.ಸಿ ಅಧಿಕಾರಿ ಸುದಿನ್ ಟಿಎ ದಿನದ ಮಹತ್ವವನ್ನು ತಿಳಿಸಿದರು. ಐಕ್ಯೂಏಸಿ ಸಂಚಾಲಕಿ ವಿದ್ಯಾ ಪಿ ಸಿರಿಧಾನ್ಯಗಳ ಉಪಯೋಗಗಳ ಬಗ್ಗೆ ಮಾತನಾಡಿದರು. ಸಿರಿಧಾನ್ಯಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಕೆಡೆಟ್ ಸಿಂಚನ ಎಸ್ ಸ್ವಾಗತಿಸಿ, ಕೆಡೆಟ್ ಪ್ರಿಯಾ ಕಾಮತ್ ವಂದಿಸಿದರು. ಕೆಡೆಟ್ ಗೌತಮ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!