Tuesday, February 25, 2025
Tuesday, February 25, 2025

ಕ್ರಿಯೇಟಿವ್‌ ಕಾಲೇಜು: ‘ನಿನಾದ’ ಬಿಡುಗಡೆ

ಕ್ರಿಯೇಟಿವ್‌ ಕಾಲೇಜು: ‘ನಿನಾದ’ ಬಿಡುಗಡೆ

Date:

ಉಡುಪಿ, ಡಿ.19: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ ‘ನಿನಾದ’ ಸಂಚಿಕೆ-5 ನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಲಿಂಗಪ್ಪ ಮತ್ತು ರತ್ನಾ ಲಿಂಗಪ್ಪ ತ್ರೈಮಾಸಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು.

ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಅಶ್ವತ್‌ ಎಸ್‌. ಎಲ್‌ ಮಾತನಾಡಿ, ನಿನಾದ ಪತ್ರಿಕೆ ವಿದ್ಯಾರ್ಥಿಗಳಿಗೆ, ಯುವ ಬರಹಗಾರರಿಗೆ ಉತ್ತಮವಾದ ವೇದಿಕೆ ಒದಗಿಸುತ್ತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಒಳ್ಳೆಯ, ಚಿಂತನಾತ್ಮಕ ಅಂಶಗಳನ್ನು ಬೆಳೆಸಲು ಹಾಗೂ ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟಲು ಕ್ರಿಯೇಟಿವ್‌ ಎಂದಿಗೂ ಸಿದ್ಧವಾಗಿದೆ. ಈಗಾಗಲೇ ನಾಲ್ಕು ಸಂಚಿಕೆಗಳನ್ನು ಪೂರೈಸಿ ಐದನೇ ಸಂಚಿಕೆ ಸಿದ್ಧವಾಗಿ ಪ್ರಕಟಗೊಳ್ಳುತ್ತಿದೆ. ಹೊಸತನದ ಬರಹಗಳು ಓದುಗರನ್ನು ಖಂಡಿತವಾಗಿಯೂ ತಲುಪುತ್ತವೆ. ಓದುಗರೂ ಸಾಕಷ್ಟು ಇದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಎಳವೆಯಲ್ಲಿಯೇ ಸಾಹಿತ್ಯದ ಕುರಿತು ಆಸಕ್ತಿ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು.

‘ನಿನಾದ’ ಸಂಚಿಕೆಯಲ್ಲಿ ಪ್ರಕಟಗೊಂಡ ಲೇಖನಗಳನ್ನು ಬರೆದ ವಿದ್ಯಾರ್ಥಿಗಳನ್ನು ಪುಸ್ತಕ ಬಹುಮಾನದೊಂದಿಗೆ ಗೌರವಿಸಲಾಯಿತು. ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಆದರ್ಶ ಎಂ.ಕೆ., ಉಪನ್ಯಾಸಕ ವರ್ಗದವರು, ನ್ಯೂಸ್‌ ಕಾರ್ಕಳದ ಜ್ಯೋತಿ ರಮೇಶ್‌, ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸಕ ಲೋಹಿತ್‌ ಎಸ್‌.ಕೆ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!