Saturday, October 19, 2024
Saturday, October 19, 2024

ಹಿಜಾಬ್ ನಿಷೇಧ ವಾಪಸ್ ಹೇಳಿಕೆ ಮೂಲಕ ಜೇನುಗೂಡಿಗೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಹಿಜಾಬ್ ನಿಷೇಧ ವಾಪಸ್ ಹೇಳಿಕೆ ಮೂಲಕ ಜೇನುಗೂಡಿಗೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

Date:

ಉಡುಪಿ, ಡಿ.23: ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ತಾನು ಚುನಾವಣೆಯಲ್ಲಿ ನೀಡಿದ ಉಚಿತ ಭಾಗ್ಯಗಳನ್ನು ಈಡೇರಿಸಲು ವಿಫಲವಾಗಿ ಗೊಂದಲದಲ್ಲಿದೆ. ತಮ್ಮ ಗೊಂದಲಗಳನ್ನು ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಾಸಾತಿಯ ಹೇಳಿಕೆಗಳನ್ನು ನೀಡಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ನಿಷೇಧ ವಾಪಸ್ ಪಡೆಯಲು ಆದೇಶ ಹೊರಡಿಸಿದರೆ ರಾಜ್ಯ ಸರಕಾರ ಜೇನುಗೂಡಿಗೆ ಕೈ ಹಾಕಿದಂತೆ. ಈಗಾಗಲೇ ಶಾಲಾ ಅಭಿವೃದ್ದಿ ಕಾರ್ಯಗಳಿಗೆ ಅನುದಾನ, ಶಿಕ್ಷಕರ ನೇಮಕಾತಿ ಸಹಿತ ಮೂಲಸೌಕರ್ಯ ಕಲ್ಪಿಸಲು ವಿಫಲವಾಗಿರುವ ಸರಕಾರ ಈ ಹೇಳಿಕೆಯ ಮೂಲಕ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಮುಂದಾಗಿದೆ.

ಮುಖ್ಯಮಂತ್ರಿಗಳ ಹೇಳಿಕೆಯಿಂದ ವಿದ್ಯಾರ್ಥಿಗಳ ನಡುವಿನಲ್ಲಿ ಸಂಘರ್ಷ ಸೃಷ್ಟಿಗೆ ಅವಕಾಶ ನೀಡಿದಂತಾಗಿದೆ. ಮತೀಯವಾದಿ ಶಕ್ತಿಗಳ ಓಲೈಕೆಗಾಗಿ ಸಿದ್ದರಾಮಯ್ಯ ರವರು ಮುಂದಾಗಿರುವುದು ದುರದೃಷ್ಟಕರ. ಸರಕಾರ ಈ ಕೂಡಲೇ ಹಿಜಾಬ್ ನಿಷೇಧ ಹಿಂಪಡೆಯುವ ಚಿಂತನೆಯನ್ನು ತಕ್ಷಣ ಕೈಬಿಟ್ಟು ರಾಜ್ಯದಲ್ಲಿ ಶಾಲಾ ಕಾಲೇಜುಗಳಲ್ಲಿ ಸುಗಮ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ವಾತಾವರಣ ಕಲ್ಪಿಸಲು ಮುಂದಾಗಲಿ. ತಪ್ಪಿದಲ್ಲಿ ಈ ಬಗ್ಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!