Saturday, February 22, 2025
Saturday, February 22, 2025

ಗಿರಿಜನರ ಕಲೆಯನ್ನು ಪ್ರೋತ್ಸಾಹಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಗಿರಿಜನರ ಕಲೆಯನ್ನು ಪ್ರೋತ್ಸಾಹಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Date:

ಉಡುಪಿ, ಡಿ.27: ವೈವಿಧ್ಯದಲ್ಲಿ ಏಕತೆಯನ್ನು ಹೊಂದಿರುವ ದೇಶದಲ್ಲಿ ವಿವಿಧ, ಧರ್ಮ, ಭಾಷೆ, ಸಂಸ್ಕೃತಿಗಳು ಸಮ್ಮಿಳಿತವಾಗಿದ್ದು, ಸಮಾಜದಲ್ಲಿ ಗಿರಿಜನರ ಕಲೆಯನ್ನು ಮುನ್ನೆಲೆಗೆ ತಂದು ಪ್ರೋತ್ಸಾಹಿಸಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ (ರಿ) ಪೆರ್ಡೂರು ಇದರ ಸಹಯೋಗದೊಂದಿಗೆ ನಡೆದ ಗಿರಿಜನ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೈವಿಧ್ಯಮಯ ಕಲಾಪ್ರಕಾರಗಳನ್ನು ಗುರುತಿಸುವುದರ ಮೂಲಕ ಗಿರಿಜನರ ಪ್ರತಿಭೆಯನ್ನು ಸಮಾಜದ ಮುಖ್ಯವಾಹಿನಿಗೆ ತಂದು ಕಲಾವಿದರನ್ನು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸದೃಢರನ್ನಾಗಿಸಬೇಕು ಎಂದರು.

ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 2023 ರ ಕರ್ನಾಟಕ ಜಿಲ್ಲಾ ರಾಜ್ಯೋತ್ಸವದಲ್ಲಿ ಸನ್ಮಾನ ಸ್ವೀಕರಿಸಿದ ಯಕ್ಷಗಾನ ಕಲಾವಿದರಾದ ಮಹಾಬಲ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಲಾವಿದರಿಂದ ಸುಗಮ ಸಂಗೀತ, ಪಟ ಕುಣಿತ, ಡೋಲು ಮತ್ತು ಕೊಳಲು ವಾದನ, ಕೊರಗರ ಮಹಿಳಾ ಸಾಂಸ್ಕೃತಿಕ ವೈಭವ, ಚಿಲಿಪಿಲಿ ಗೊಂಬೆ, ಪುಣ್ಯಕೋಟಿ ನೃತ್ಯ ರೂಪಕ, ಹೋಳಿ ಕುಣಿತ, ಕುಣಿತ ಭಜನೆ, ಯಕ್ಷಗಾನ ವೈಭವ, ಕರಗ ಕೋಲಾಟ, ಚಂಡೆವಾದನ, ಬೇಡರ ಕುಣಿತ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೊರಗ ಸಂಘದ ಜಿಲ್ಲಾ ಅಧ್ಯಕ್ಷೆ ಗೌರಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಮತ್ತು ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರವಿ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವಾಣಿ ಪೆರ್ಡೂರು ನಿರೂಪಿಸಿ, ಪ್ರತೀಕ್ಷಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!