Tuesday, February 25, 2025
Tuesday, February 25, 2025

ಕುವೆಂಪುರವರ ಮಾನವತಾವಾದಿ ಚಿಂತನೆಗಳು ಸಾರ್ವಕಾಲಿಕ: ಪ್ರೊ. ಸುರೇಶ್‌ ರೈ

ಕುವೆಂಪುರವರ ಮಾನವತಾವಾದಿ ಚಿಂತನೆಗಳು ಸಾರ್ವಕಾಲಿಕ: ಪ್ರೊ. ಸುರೇಶ್‌ ರೈ

Date:

ಮಲ್ಪೆ, ಡಿ.31: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿ ವಿಶ್ವ ಮಾನವತಾವಾದಿ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲರಾದ ಪ್ರೊ. ಸುರೇಶ್‌ ರೈ ಕೆ ಮಾತನಾಡುತ್ತಾ, ವೈಜ್ಞಾನಿಕ ಮತ್ತು ವಿಶಾಲ ಬದುಕಿನ ಸಾಹಿತ್ಯವನ್ನು ಕೊಡುಗೆಯಾಗಿ ನೀಡಿದ ರಾಷ್ಟ್ರಕವಿ ಕುವೆಂಪುರವರ ಮಾನವತಾವಾದಿ ಚಿಂತನೆಗಳು ಸಾರ್ವಕಾಲಿಕ ಮತ್ತು ನಮಗೆಲ್ಲಾ ಆದರ್ಶವೆಂದರು. ಕನ್ನಡ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ನೈನಾ ಶೆಟ್ಟಿ, ಸಂಗೀತಾ, ವಿಠಲ್, ಹಾಗೂ ಇತಿಹಾಸ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಾಘವೇಂದ್ರ ಜಿ. ಗಾಣಿಗ ಕುವೆಂಪುರವರ ಪ್ರಸಿದ್ದ ಕವಿತೆಗಳನ್ನು ವಾಚಿಸಿದರು.

ಕನ್ನಡ ಸ್ನಾತಕೋತ್ತರ ವಿಭಾಗದ ಉಪನ್ಯಾಸಕರಾದ ಶಾಲಿನಿ ಯು.ಬಿ., ಶರಿತಾ, ಅರ್ಚನಾ ಹಾಗೂ ಇತಿಹಾಸ ವಿಭಾಗದ ಡಾ. ಮಹೇಶ್ ಕುಮಾರ್ ಕೆ.ಈ. ಹಾಗೂ ಡಾ. ಮೋಹನ್ ಉಪಸ್ಥಿತರಿದ್ದರು. ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಕಾರ್ಯಕ್ರಮ ಸಂಘಟಿಸಿದರು. ಗ್ರಂಥಾಯದಲ್ಲಿ ಕುವೆಂಪುರವರ ಸಮಗ್ರ ಕೃತಿ ಪ್ರದರ್ಶಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!